ರಾಜ್ಯಸಭೆ ಚುನಾವಣೆಯಲ್ಲಿ (Rajasabha election) ಬಿಜೆಪಿಯ (Bjp) ಮೂವರು ಅಭ್ಯರ್ಥಿಗಳು ಗೆಲ್ಲುವುದು ಶತಸಿದ್ದ ಎಂದು ಮಾಜಿ ಸಿಎಂ ಯಡಿಯೂರಪ್ಪ (Yediyurappa) ಹೇಳಿದ್ದಾರೆ. ಬೆಂಗಳೂರಿನಲ್ಲಿ (Bengaluru) ಮಾತನಾಡಿದ ಅವರು ಯಾವುದೇ ರೀತಿಯ ಹೇಳಿಕೆಗೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ .
![](https://rajnewskannada.in/wp-content/uploads/2022/06/image-75-1024x768.png)
ಲೆಹರ್ ಸಿಂಗ್ (Lehar singh)ಸೇರಿ ಮೂವರು ನೂರಕ್ಕೆ ನೂರರಷ್ಟು ಗೆಲ್ಲೋದು ಶತಸಿದ್ದ .ಮೂರನೇ ಅಭ್ಯರ್ಥಿ ಗೆಲುವಿಗೆ ಎರಡನೇ ಪ್ರಾಶಸ್ತ್ಯದ ಮತಗಳೇ ಸಾಕು. ಅದನ್ನು ಹೊರತುಪಡಿಸಿ ನಮಗೆ ಯಾವುದೇ ಮತಗಳು ಬೇಕಾಗಿಲ್ಲ. ಬಿಜೆಪಿಯಿಂದ ಆತ್ಮಸಾಕ್ಷಿಯ ಮತಗಳು ಬರ್ತಾವೆ ಎಂಬ ಸಿದ್ದರಾಮಯ್ಯ (Siddaramaiah) ಹೇಳಿಕೆಗೆ ಪ್ರತಿಕ್ರಿಯಿಸಿ ಈ ಬಗ್ಗೆ ನಾನು ಮಾತಾಡಲ್ಲ. ಚುನಾವಣೆ ಫಲಿತಾಂಶ ಬಂದಾಗ ನೀವೇ ನೋಡ್ತೀರಲ್ಲ ಎಂದು ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ.ಶಿಕ್ಷಕರು ಪದವೀಧರ ಕ್ಷೇತ್ರಗಳಿಗೆ ಚುನಾವಣೆ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಬೆಳಗಾವಿಗೆ ತೆರಳಲಿದ್ದಾರೆ . ನಾಳೆ ನಾಡಿದ್ದು ಬಾಗಲಕೋಟೆ, ವಿಜಯಪುರ, ಬೆಳಗಾವಿ, ಚಿಕ್ಕೋಡಿಯಲ್ಲಿ ಅಭ್ಯರ್ಥಿಗಳ ಪರ ಬಿಎಸ್ವೈ ಮತಯಾಚನೆ ಮಾಡಲಿದ್ದಾರೆ. ಜೂನ್ 8 ರಂದು ಮಾಜಿ ಸಿಎಂ ಯಡಿಯೂರಪ್ಪ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ. ಇದನ್ನೂ ಓದಿ : – ಸಂಘ ನಿಷೇಧ ಮಾಡಲು ಹೋದವರು ಕೈ ಸುಟ್ಟುಕೊಂಡಿದ್ದಾರೆ – ಸಿದ್ದು ವಿರುದ್ಧ ಕಟೀಲ್ ವಾಗ್ದಾಳಿ