ಎರಡನೇ ಹಂತದ ಆಪರೇಷನ್ ಬಿಜೆಪಿ ಫಿಕ್ಸ್ – ಸಚಿವ ಎಸ್ ಟಿ ಸೋಮಶೇಖರ್ ಸುಳಿವು

ಹಳೇ ಮೈಸೂರು ಭಾಗದಲ್ಲಿ ಎರಡನೇ ಹಂತದ ಆಪರೇಷನ್ ಬಿಜೆಪಿ ಫಿಕ್ಸ್ ಆಗಿದೆ. ಶೀಘ್ರದಲ್ಲೇ ಮೈಸೂರು ಭಾಗದ ಐದಾರು ಘಟಾನುಘಟಿ ನಾಯಕರು ಬಿಜೆಪಿ ಸೇರ್ಪಡೆ ನಿಶ್ಚಿತ ಎಂದು ಮೈಸೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಸುಳಿವು ನೀಡಿದ್ದಾರೆ.

ನಾಯಕರುಗಳ ಜೊತೆಗೆ ಕೊನೆಯ ಹಂತದ ಮಾತುಕತೆಗಳು ನಡೆಯುತ್ತಿವೆ. ಬಿಜೆಪಿ ರಾಜ್ಯಾಧ್ಯಕ್ಷರ ಗ್ರೀನ್ ಸಿಗ್ನಲ್ ಬಾಕಿ ಇದೆ. ಯಾವ ಕಂಡೀಷನ್ ಗಳಿಲ್ಲದೇ ನಾಯಕರು ಬಿಜೆಪಿ ಸೇರ್ಪಡೆಗೆ ಒಪ್ಪಿದ್ದಾರೆ. ಇದರಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಎರಡೂ ಪಕ್ಷದವರು ಇದ್ದಾರೆ. ಯಾರು ಆ ನಾಯಕರು ಎಂಬುದು ಈ ಹಂತದಲ್ಲಿ ಹೇಳಲು ಸಾಧ್ಯವಿಲ್ಲ. ಕೊನೆಯ ಹಂತದ ಮಾತುಕತೆ ಮುಗಿಯಲಿ. ನಾವೇ ಎಲ್ಲವನ್ನೂ ಸ್ಪಷ್ಟ ಪಡಿಸುತ್ತೇವೆ ಎಂದು ಹೇಳಿದ್ದಾರೆ. ಜಿ ಟಿ ದೇವೇಗೌಡರು ಹಾಗೂ ಪುತ್ರ ಬಿಜೆಪಿಗೆ ಸೇರೋ ಸಾಧ್ಯತೆ ದಟ್ಟವಾಗಿದೆ ಎಂದು ತಿಳಿಸಿದ್ರು.  ಇದನ್ನೂಓದಿ : – ರಮ್ಯಾ ಪಕ್ಷ ಬಿಟ್ಟು ಹೋಗಿಲ್ಲ, ಯಾವಾಗ ಬೇಕಾದ್ರೂ ಸಂಘಟನೆಗೆ ಬರಬಹುದು – ಎಂಎಲ್ಸಿ ರಾಜೇಂದ್ರ

ನಲಪಾಡ್​ ಹಳೇ ಕೇಸ್​ ಕೆದಕಿ ಕೆಣಕಿದ ನಟಿ ರಮ್ಯಾ; ಜಾಮೀನಿನ ಮೇಲಿರುವ ಅಧ್ಯಕ್ಷ ಎಂದು ವ್ಯಂಗ್ಯ.. –


ಕಾಂಗ್ರೆಸ್ ಆಂತರಿಕ ಕಿತ್ತಾಟ ವಿಚಾಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು ಎಐಸಿಸಿ ವೀಕ್ ಆಗಿರೋ ಪರಿಣಾಮ ಎಲ್ಲರೂ ನಾಯಕರಾಗಿದ್ದಾರೆ. ಇದು ಆರಂಭ ಅಷ್ಟೇ, ಮುಂದೆ ಮತ್ತಷ್ಟು ಹೆಚ್ಚುತ್ತೆ. ಇದು ವಿಕೋಪಕ್ಕೆ ತಿರುಗಿ ಪಕ್ಷವೇ ಮುಗಿಯುವ ಹಂತಕ್ಕೆ ಹೋಗುತ್ತೆ. ಕಾಂಗ್ರೆಸ್ ನಲ್ಲಿ ಈಗ 4 ಗುಂಪಾಗಿದೆ. ಯಾರೂ ಕೂಡ ಆಂತರಿಕವಾಗಿ ಚೆನ್ನಾಗಿಲ್ಲ. ಮೇಲ್ನೋಟಕ್ಕೆ ಒಟ್ಟಿಗೆ ಕಾಣಿಸಿಕೊಂಡ್ರು ಒಳಗೆ ಅಸಮಾಧಾನ ಇದೆ. ನಟಿ ರಮ್ಯಾ ವಿಚಾರದಲ್ಲೂ ಅದು ಬಹಿರಂಗವಾಗಿದೆ ಎಂದು ಹೇಳಿದ್ರು.


ಸಿಎಂ ಬೊಮ್ಮಾಯಿ ವೀಕ್, ಇದು ಭ್ರಷ್ಟ ಸರ್ಕಾರ ಎಂಬ ಸಿದ್ದು ಹೇಳಿಕೆ ವಿಚಾರ
ನಮ್ಮ ಮುಖ್ಯಮಂತ್ರಿಗಳು ವೀಕ್ ಅಲ್ಲ. ಅವರ ಮೇಲೆ ಯಾವುದೇ ಕಪ್ಪುಚುಕ್ಕಿ ಇಲ್ಲ. ಉತ್ತಮ ನಿರ್ಯಗಳನ್ನು ತೆಗೆದುಕೊಂಡು ಒಳ್ಳೆಯ ಆಡಳಿತ ಮಾಡ್ತಿದ್ದಾರೆ. ಸಿದ್ದರಾಮಯ್ಯ ತಮ್ಮ ಅಸ್ತಿತ್ವಕ್ಕೆಕ್ಕಾಗಿ ಈ ರೀತಿ ಮಾತನಾಡುತ್ತಿದ್ದಾರೆ. ಕಾಂಗ್ರೆಸ್ ವರಿಷ್ಠರ ಒಲೈಕೆ ಮಾಡಲು ಹೀಗೆ ಹೇಳಿಕೆ ನೀಡ್ತಾರೆ. ಒಂದು ದಿನವೂ ವಿರೋಧ ಪಕ್ಷದ ನಾಯಕನ ಕೆಲಸ ಮಾಡಿಲ್ಲ ಎಂದು ಸಿದ್ದರಾಮಯ್ಯಗೆ ಸಚಿವ ಎಸ್.ಟಿ.ಸೋಮಶೇಖರ್ ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ : – 7 ವರ್ಷಗಳಿಂದ ಯುವತಿ ಹಿಂದೆ ನಾಗೇಶ್ ಬಿದ್ದಿದ್ದ – ನಾಗನ ರೋಚಕ ಕಹಾನಿ ಬಿಚ್ಚಿಟ್ಟ ಕಮಲ್ ಪಂತ್

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!