ಹಳೇ ಮೈಸೂರು ಭಾಗದಲ್ಲಿ ಎರಡನೇ ಹಂತದ ಆಪರೇಷನ್ ಬಿಜೆಪಿ ಫಿಕ್ಸ್ ಆಗಿದೆ. ಶೀಘ್ರದಲ್ಲೇ ಮೈಸೂರು ಭಾಗದ ಐದಾರು ಘಟಾನುಘಟಿ ನಾಯಕರು ಬಿಜೆಪಿ ಸೇರ್ಪಡೆ ನಿಶ್ಚಿತ ಎಂದು ಮೈಸೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಸುಳಿವು ನೀಡಿದ್ದಾರೆ.
![](https://rajnewskannada.in/wp-content/uploads/2022/05/WhatsApp-Image-2022-05-14-at-5.27.05-PM.jpeg)
ನಾಯಕರುಗಳ ಜೊತೆಗೆ ಕೊನೆಯ ಹಂತದ ಮಾತುಕತೆಗಳು ನಡೆಯುತ್ತಿವೆ. ಬಿಜೆಪಿ ರಾಜ್ಯಾಧ್ಯಕ್ಷರ ಗ್ರೀನ್ ಸಿಗ್ನಲ್ ಬಾಕಿ ಇದೆ. ಯಾವ ಕಂಡೀಷನ್ ಗಳಿಲ್ಲದೇ ನಾಯಕರು ಬಿಜೆಪಿ ಸೇರ್ಪಡೆಗೆ ಒಪ್ಪಿದ್ದಾರೆ. ಇದರಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಎರಡೂ ಪಕ್ಷದವರು ಇದ್ದಾರೆ. ಯಾರು ಆ ನಾಯಕರು ಎಂಬುದು ಈ ಹಂತದಲ್ಲಿ ಹೇಳಲು ಸಾಧ್ಯವಿಲ್ಲ. ಕೊನೆಯ ಹಂತದ ಮಾತುಕತೆ ಮುಗಿಯಲಿ. ನಾವೇ ಎಲ್ಲವನ್ನೂ ಸ್ಪಷ್ಟ ಪಡಿಸುತ್ತೇವೆ ಎಂದು ಹೇಳಿದ್ದಾರೆ. ಜಿ ಟಿ ದೇವೇಗೌಡರು ಹಾಗೂ ಪುತ್ರ ಬಿಜೆಪಿಗೆ ಸೇರೋ ಸಾಧ್ಯತೆ ದಟ್ಟವಾಗಿದೆ ಎಂದು ತಿಳಿಸಿದ್ರು. ಇದನ್ನೂಓದಿ : – ರಮ್ಯಾ ಪಕ್ಷ ಬಿಟ್ಟು ಹೋಗಿಲ್ಲ, ಯಾವಾಗ ಬೇಕಾದ್ರೂ ಸಂಘಟನೆಗೆ ಬರಬಹುದು – ಎಂಎಲ್ಸಿ ರಾಜೇಂದ್ರ
![ನಲಪಾಡ್ ಹಳೇ ಕೇಸ್ ಕೆದಕಿ ಕೆಣಕಿದ ನಟಿ ರಮ್ಯಾ; ಜಾಮೀನಿನ ಮೇಲಿರುವ ಅಧ್ಯಕ್ಷ ಎಂದು ವ್ಯಂಗ್ಯ.. –](https://www.vijayavani.net/wp-content/uploads/2022/05/Ramya-Nalapad.jpg)
ಕಾಂಗ್ರೆಸ್ ಆಂತರಿಕ ಕಿತ್ತಾಟ ವಿಚಾಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು ಎಐಸಿಸಿ ವೀಕ್ ಆಗಿರೋ ಪರಿಣಾಮ ಎಲ್ಲರೂ ನಾಯಕರಾಗಿದ್ದಾರೆ. ಇದು ಆರಂಭ ಅಷ್ಟೇ, ಮುಂದೆ ಮತ್ತಷ್ಟು ಹೆಚ್ಚುತ್ತೆ. ಇದು ವಿಕೋಪಕ್ಕೆ ತಿರುಗಿ ಪಕ್ಷವೇ ಮುಗಿಯುವ ಹಂತಕ್ಕೆ ಹೋಗುತ್ತೆ. ಕಾಂಗ್ರೆಸ್ ನಲ್ಲಿ ಈಗ 4 ಗುಂಪಾಗಿದೆ. ಯಾರೂ ಕೂಡ ಆಂತರಿಕವಾಗಿ ಚೆನ್ನಾಗಿಲ್ಲ. ಮೇಲ್ನೋಟಕ್ಕೆ ಒಟ್ಟಿಗೆ ಕಾಣಿಸಿಕೊಂಡ್ರು ಒಳಗೆ ಅಸಮಾಧಾನ ಇದೆ. ನಟಿ ರಮ್ಯಾ ವಿಚಾರದಲ್ಲೂ ಅದು ಬಹಿರಂಗವಾಗಿದೆ ಎಂದು ಹೇಳಿದ್ರು.
![](https://rajnewskannada.in/wp-content/uploads/2022/05/ಚಮ-3-2.png)
ಸಿಎಂ ಬೊಮ್ಮಾಯಿ ವೀಕ್, ಇದು ಭ್ರಷ್ಟ ಸರ್ಕಾರ ಎಂಬ ಸಿದ್ದು ಹೇಳಿಕೆ ವಿಚಾರ
ನಮ್ಮ ಮುಖ್ಯಮಂತ್ರಿಗಳು ವೀಕ್ ಅಲ್ಲ. ಅವರ ಮೇಲೆ ಯಾವುದೇ ಕಪ್ಪುಚುಕ್ಕಿ ಇಲ್ಲ. ಉತ್ತಮ ನಿರ್ಯಗಳನ್ನು ತೆಗೆದುಕೊಂಡು ಒಳ್ಳೆಯ ಆಡಳಿತ ಮಾಡ್ತಿದ್ದಾರೆ. ಸಿದ್ದರಾಮಯ್ಯ ತಮ್ಮ ಅಸ್ತಿತ್ವಕ್ಕೆಕ್ಕಾಗಿ ಈ ರೀತಿ ಮಾತನಾಡುತ್ತಿದ್ದಾರೆ. ಕಾಂಗ್ರೆಸ್ ವರಿಷ್ಠರ ಒಲೈಕೆ ಮಾಡಲು ಹೀಗೆ ಹೇಳಿಕೆ ನೀಡ್ತಾರೆ. ಒಂದು ದಿನವೂ ವಿರೋಧ ಪಕ್ಷದ ನಾಯಕನ ಕೆಲಸ ಮಾಡಿಲ್ಲ ಎಂದು ಸಿದ್ದರಾಮಯ್ಯಗೆ ಸಚಿವ ಎಸ್.ಟಿ.ಸೋಮಶೇಖರ್ ತಿರುಗೇಟು ನೀಡಿದ್ದಾರೆ.
ಇದನ್ನೂ ಓದಿ : – 7 ವರ್ಷಗಳಿಂದ ಯುವತಿ ಹಿಂದೆ ನಾಗೇಶ್ ಬಿದ್ದಿದ್ದ – ನಾಗನ ರೋಚಕ ಕಹಾನಿ ಬಿಚ್ಚಿಟ್ಟ ಕಮಲ್ ಪಂತ್