ವ್ಯಕ್ತಿಯ ಮೇಲೆ ದಾಳಿ ಮಾಡಿದ್ದ 7 ಮಂದಿ ಆರೋಪಿಗಳ ಬಂಧನ

ಮಂಗಳೂರು : ಕೈಕಂಬದಲ್ಲಿ ಸಾಮಾಜಿಕ ಕಾರ್ಯಕರ್ತ ವೆನ್ಝ್ ಅಬ್ದುಲ್ಲಾ ಅವರ ಮೇಲೆ ತಲವಾರಿನಲ್ಲಿ ದಾಳಿ ನಡೆಸಿದ್ದ ಪ್ರಕರಣವನ್ನು ಮಂಗಳೂರು ಸಿಸಿಬಿ ಪೊಲೀಸರು ಕೊನೆಗೂ ಭೇದಿಸಿ 7 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ಕಂಕನಾಡಿಯ ಅಬ್ದುಲ್ ಜಬ್ಬಾರ್ ಯಾನೆ ಮಾರಿಪಳ್ಳ ಜಬ್ಬಾರ್, ನಝೀರ್ ಅಹಮ್ಮದ್ ಫರಿಂಗಿಪೇಟೆ, ಬಿಲಾಲ್ ಮೊಯಿದ್ದೀನ್ ಫಳ್ನೀರ್, ಇಬ್ರಾಹೀಂ ಶಾಕೀರ್ ಮುಳಿಹಿತ್ಲು, ಮುಹಮ್ಮದ್ ನಿಹಾಲ್ ಅತ್ತಾವರ, ಅಬ್ಬಾಸ್ ಅಫ್ವಾನ್ ಪಾಂಡೇಶ್ವರ ಹಾಗೂ ಮುಹಮ್ಮದ್ ಅತಿಂ ಇಶಾಂ ಪಾಂಡೇಶ್ವರ ಎಂದು ಗುರುತಿಸಲಾಗಿದೆ.

ವಿದೇಶದಲ್ಲಿ ತಲೆ ಮರೆಸಿಕೊಂಡಿರುವ ಆರೋಪಿಗಳಾದ ನಿಝಾಮುದ್ದೀನ್, ಸಫ್ವಾನ್ ಹುಸೇನ್, ಬಾಶಿತ್ ಎಂಬವರ ಜತೆ ಸೇರಿಕೊಂಡು ಈ ಆರೋಪಿಗಳು ಇತರ ಸಹಾಯದಿಂದ ಕೊಲೆ ಯತ್ನ ನಡೆಸಿದ್ದಾರೆ ಎಂದು ಮಂಗಳೂರು ನಗರದ ಪೊಲೀಸ್ ಕಮಿಷನರ್ ಶಶಿಕುಮಾರ್ ಮಾಹಿತಿ ನೀಡಿದ್ದಾರೆ.

2020ರ ನವೆಂಬರ್ 15ರಂದು ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ಕಂದಾವರ ಮಸೀದಿ ಬಳಿ ಅಬ್ದುಲ್ ಅಝೀಝ್‌ರವರು ರಾತ್ರಿ 10.30ರ ವೇಳೆಗೆ ಮಸೀದಿಯಿಂದ ಮನೆಗೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಕ್​ನಲ್ಲಿ ಬಂದ ತಂಡ ತಲವಾರಿನಿನಿಂದ ಕಡಿದು ಕೊಲೆಗೆ ಯತ್ನಿಸಲಾಗಿತ್ತು. ಘಟನೆಯಲ್ಲಿ ಗಾಯಗೊಂಡಿದ್ದ ಅಬ್ದುಲ್ ಅಝೀಝ್ ರನ್ನು ಮಂಗಳೂರಿನ ಫಳ್ನೀರ್‌ನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇದೇ ವೇಳೆ ಆಸ್ಪತ್ರೆಯಲ್ಲಿದ್ದ ಅವರ ತಂಗಿಯ ಮಗ ಮಕ್ದೂಮ್‌ರವರು ಆಸ್ಪತ್ರೆಯ ಮುಖ್ಯ ದ್ವಾರದ ಬಳಿ ಅಬ್ದುಲ್ ಅಝೀಝ್ ರ ಮಗಳ ಗಂಡ ನೌಶಾದ್ ಎಂಬವರ ಜತೆ ಮಾತನಾಡುತ್ತಿದ್ದ ವೇಳೆ ಇಬ್ಬರು ಯುವಕರು ಮಕ್ದೂಮ್ ಎಂದು ಭಾವಿಸಿ ನೌಶಾದ್‌ರಿಗೆ ತಲವಾರಿನಿಂದ ಹಲ್ಲೆ ನಡೆಸಿದ್ದರು.

ಈ ಎರಡೂ ಕೊಲೆ ಯತ್ನ ಪ್ರಕರಣವು ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿ ನಡೆದಿದಿತ್ತು. ಈ ಪ್ರಕರಣವನ್ನು ಬೇಧಿಸಿದ ಸಿಸಿಬಿ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಅಭಿನಂದಿಸಿರುವ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ತಂಡಕ್ಕೆ 10 ಸಾವಿರ ರೂ ಗಳ ನಗದು ಬಹುಮಾನ ಘೋಷಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!