ಜ್ಞಾನವಾಪಿ ಮಸೀದಿ ಸಂಕೀರ್ಣದ ವೀಡಿಯೋ ಸಹಿತ ಮೂರನೇ ದಿನದ ಸಮೀಕ್ಷೆಯು ಮುಕ್ತಾಯವಾಗಿದೆ. ಮಸೀದಿ ಸಂಕೀರ್ಣದೊಳಗಿನ ಕೊಳದಲ್ಲಿ ಶಿವಲಿಂಗ ಪತ್ತೆಯಾಗಿದೆ ಎಂದು ಸಮೀಕ್ಷಾ ಸಮಿತಿ ತಂಡದ ಸದಸ್ಯ ವಕೀಲ ಸುಭಾಷ್ ನಂದನ್ ಚತುರ್ವೇದಿ ಹೇಳಿದ್ದಾರೆ.
![Shivalinga discovered Jnanavapi mosque Statement of Hindu Party as Survey ends](https://vijaykarnataka.com/photo/msid-91568082,imgsize-1483706/pic.jpg)
‘ಸಮೀಕ್ಷಾ ಸಮಿತಿ ಎಲ್ಲಾ ಸ್ಥಳಗಳನ್ನು ವಿವರವಾಗಿ ಚಿತ್ರೀಕರಿಸಿದೆ. ಮೂರು ಗುಮ್ಮಟಗಳು, ಭೂಗತ ನೆಲಮಾಳಿಗೆಗಳು, ಕೊಳ ಎಲ್ಲವನ್ನೂ ವಿಡಿಯೋ ರೆಕಾರ್ಡ್ ಮಾಡಲಾಗಿದೆ. ನಾಳೆ ಅಲಹಾಬಾದ್ ನ್ಯಾಯಾಲಯಕ್ಕೆ ವಕೀಲ ಕಮಿಷನರ್ ತಮ್ಮ ವರದಿಯನ್ನು ಸಲ್ಲಿಸಲಿದ್ದಾರೆ. ಶಿವಲಿಂಗ ಪತ್ತೆಯಾದ ಸ್ಥಳಕ್ಕೆ ಬೀಗಮುದ್ರೆ ಹಾಕಬೇಕು ಎಂದು ವಾರಾಣಾಸಿ ಜಿಲ್ಲಾಡಳಿತಕ್ಕೆ ಸೆಷನ್ಸ್ ಕೋರ್ಟ್ ಸೂಚನೆ ನೀಡಿದೆ. ಸಿಎಆರ್ ಪಿಎಫ್ ತಂಡ ನಿಯೋಜಿಸುವಂತೆ ಕೋರ್ಟ್ ಸೂಚನೆ ನೀಡಿದೆ.
ಇದನ್ನೂ ಓದಿ : – 14 ವರ್ಷದ ನಂತರ ವಿಶೇಷ ದಾಖಲೆ ಬರೆದ KRS ಡ್ಯಾಂ