ಕೊರೊನಾ ನಿಯಮ ಉಲ್ಲಂಘಿಸಿ ಮೇಕೆದಾಟು ಪಾದಯಾತ್ರೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರಿಗೆ ಸಮನ್ಸ್ ಜಾರಿ ಮಾಡಲಾಗಿದೆ.
![ಮೇಕೆದಾಟು: ಸಿದ್ದರಾಮಯ್ಯ, ಡಿಕೆಶಿ ಮಧ್ಯೆ ವಿಡಿಯೋ ಶೂಟೌಟ್ ಜಿದ್ದು! | Mekedatu Padayatra: Video Shoot Out Competition Between Siddaramaiah And D K Shivakumar - Kannada Oneindia](https://kannada.oneindia.com/img/2022/01/sidda-main-1641126250.jpg)
ನಾಳೆ ವಿಚಾರಣೆಗೆ ಹಾಜರಾಗುವಂತೆ ಕಾಂಗ್ರೆಸ್ ನಾಯಕ ಹಾಗೂ ವಿಧಾನಸಭಾ ವಿಪಕ್ಷ ನಾಯಕ ಸಿದ್ದರಾಮಯ್ಯ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಜನವರಿ 9 ರಂದು ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ‘ಮೇಕೆದಾಟು ಪಾದಯಾತ್ರೆ’ ನಡೆಸಿದ್ದರು. ಇದನ್ನೂ ಓದಿ :- ಅರಬ್ ದೇಶಗಳಲ್ಲಿ ಭಾರತದ ಮೇಲೆ ಹಬ್ಬಿದ ವದಂತಿ ಏನು ಗೊತ್ತಾ…?
![ಮೇಕೆದಾಟು ಪಾದಯಾತ್ರೆ; ಡಿಕೆಶಿ, ಸಿದ್ದರಾಮಯ್ಯ ಇತರ ನಾಯಕರ ವಿರುದ್ಧ ಎಫ್ಐಆರ್ | Mekedatu Padayatra 2.0: FIR Registered Against Siddaramaiah, DK Shivakumar and 37 Leaders - Kannada Oneindia](https://kannada.oneindia.com/img/2022/02/mekedatupadayatr-1-1646048601.jpg)
ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಿದ್ದ ಸಂದರ್ಭದಲ್ಲೂ ಪಾದಯಾತ್ರೆ ಹಮ್ಮಿಕೊಂಡಿದ್ದ ವಿಚಾರ ಹೈಕೋರ್ಟ್ ವರೆಗೂ ತಲುಪಿತ್ತು. ಹೈಕೋರ್ಟ್ ನಿರ್ದೇಶನ ಆಧರಿಸಿ ಜ.13ಕ್ಕೆ ರಾಮನಗರದಲ್ಲಿ ಪಾದಯಾತ್ರೆ ಕೊನೆಗೊಳಿಸಲಾಗಿತ್ತು.
ಇದನ್ನೂ ಓದಿ :- ಶ್ರೀಲಂಕಾ ಆರ್ಥಿಕ ಬಿಕ್ಕಟ್ಟು – ರಾಜಪಕ್ಸೆ ಸಂಪುಟಕ್ಕೆ ಎಂಟು ಸಚಿವರು ಸೇರ್ಪಡೆ !