ಪ್ರಧಾನಿ ನರೇಂದ್ರ ಮೋದಿ ( NARENDRA MODI ) ರಾಜ್ಯಕ್ಕೆ ಭೇಟಿ ನೀಡಿದ ಬಳಿಕ ಸಖತ್ ಅಲರ್ಟ್ ಆಗಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ( SIDDARAMAIAH ) ಇಂದು ಕೋಲಾರಕ್ಕೆ ಭೇಟಿ ನೀಡಿದ್ದಾರೆ.
ವಿಷೇಷ ಬಸ್ ಮೂಲಕ ಕೋಲಾರ ( KOLARA ) ಕ್ಕೆ ಪ್ರಯಾಣ ಮಾಡುವ ಮುನ್ನ ಮಾತನಾಡಿದ ಅವರು, ಎಲ್ಲರು ಒಟ್ಟಾಗಿ ಹೋಗಬೇಕು, ಅದಕ್ಕಾಗಿ ಬಸ್ಸಿನಲ್ಲಿ ಹೋಗ್ತಿದ್ದೇವೆ. ಕೋಲಾರಲ್ಲಿ ಎಲ್ಲಾರು ನನ್ನನ್ನು ಕರೆಯುತ್ತಿದ್ದಾರೆ. ಅಲ್ಲಿ ಶ್ರೀನಿವಾಸ್ ಗೌಡ ನಿಲ್ಲಲ್ಲ, ಅದಕ್ಕೆ ನೀವು ನಿಲ್ಲಿ ಅಂತಿದ್ದಾರೆ. ಅನೇಕ ಕಡೆಗಳಲ್ಲೂ ಕರೆಯುತ್ತಿದ್ದಾರೆ. ಅದಕ್ಕಾಗಿ ಅಲ್ಲಿ ಪರಿಶೀಲನೆ ಮಾಡಲು ಕೋಲಾರಕ್ಕೆ ಹೋಗ್ತಿದ್ದೇನೆ. ಇದನ್ನೂ ಓದಿ : – ಅಮೆರಿಕದ ಏರ್ ಶೋ ವೇಳೆ 2ನೇ ವಿಶ್ವಯುದ್ಧ ಕಾಲದ ವಿಮಾನಗಳು ಪರಸ್ಪರ ಡಿಕ್ಕಿ – ಮೂವರ ಸಾವು
ಅಂತಿಮವಾಗಿ ಹೈಕಮಾಂಡ್ ಯಾವ ತೀರ್ಮಾನ ಮಾಡುತ್ತದೋ ಅಲ್ಲಿ ಸ್ಪರ್ಧೆ ಮಾಡ್ತೀನಿ . ಬಾದಾಮಿ, ವರುಣಾ, ಚಾಮರಾಜಪೇಟೆ ( CHAMARAJPETE ) ಯಲ್ಲೂ ಸ್ಪರ್ಧೆಗೆ ಒತ್ತಡ ಇದೆ. ಆದರೆ ಕೋಲಾರದಲ್ಲಿ ಜಾಸ್ತಿ ಒತ್ತಡ ಇದೆ. ಅದಕ್ಕಾಗಿ ನಾನು ಇಂದು ಅಲ್ಲಿಗೆ ಹೋಗ್ತಿದ್ದೇನೆ. ಇಂದು ಅಲ್ಲಿನ ಸ್ಥಳೀಯ ನಾಯಕರ ಜೊತೆ ಚರ್ಚಿಸಿ ಸೂಕ್ತ ತೀರ್ಮಾನ ಮಾಡ್ತೀನಿ ಎಂದು ಹೇಳಿದ್ರು.
ಇದನ್ನೂ ಓದಿ : – ಕರ್ನಾಟಕದಲ್ಲಿ ಇಂದಿನಿಂದ 3 ದಿನ – ಹಳದಿ ಅಲರ್ಟ್ ಘೋಷಣೆ