ಸಿದ್ದರಾಮಯ್ಯ ಸುಳ್ಳು ಆಪಾದನೆ ಮಾಡ್ತಿದಾರೆ. OBC ಮೀಸಲಾತಿ ಹೋಗಲು ಬಿಜೆಪಿಯೇ ಕಾರಣ ಅಂತ ಹೇಳಿದ್ದಾರೆ. ಸುಳ್ಳನ್ನ ಮನೆ ದೇವರು ಮಾಡಿಕೊಂಡಿದ್ದಾರೆ ಎಂದು ಸಿ.ಟಿ ರವಿ ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
![](https://rajnewskannada.in/wp-content/uploads/2022/05/WhatsApp-Image-2022-05-14-at-1.06.01-PM-1.jpeg)
ಬೆಂಗಳೂರಿನಲ್ಲಿ ಮಾತನಾಡಿದ ಅವರು ಕೇಸ್ ನಡೆದಿದ್ದು ಮಹಾರಾಷ್ಟ್ರ ಸರ್ಕಾರದ ಬಗ್ಗೆ. ಅಲ್ಲಿರೋದು ಕಾಂಗ್ರೆಸ್ ಬೆಂಬಲಿತ ಸರ್ಕಾರ. ಇದಕ್ಕೆ ಕಾಂಗ್ರೆಸ್ ಸರ್ಕಾರವೇ ಕಾರಣ. ಅವರು ಎತ್ತಿಹಿಡಿದಿದ್ರೆ ಇಂದು ಈ ಪರಿಸ್ಥಿತಿ ಬರ್ತಿರಲಿಲ್ಲ. ನಮ್ಮ ಸರ್ಕಾರ ಹಿಂದುಳಿದ ಪರವಾಗಿದೆ. ಇದನ್ನೂ ಓದಿ : – ವಿಧಾನ ಪರಿಷತ್ತಿನ ಏಳು ಸ್ಥಾನಗಳಲ್ಲಿ ಬಿಜೆಪಿ ಶಾಸಕರಿಗೆ ನಾಲ್ಕು ಸ್ಥಾನಗಳು
![](https://rajnewskannada.in/wp-content/uploads/2022/05/WhatsApp-Image-2022-05-14-at-1.06.03-PM2.jpeg)
ಹಿಂದುಳಿದ ವರ್ಗದ ಆಯೋಗ ರಚನೆ ಮಾಡಿದ್ದೆ ಬಿಜೆಪಿ. ಮಾಜಿ ಸಿಎಂ ಸಿದ್ದರಾಮಯ್ಯ ಅರ್ಥ ಮಾಡಿಕೊಳ್ಳಬೇಕು. ಮಹಾರಾಷ್ಟ್ರದಲ್ಲಿ ನಿಮ್ಮದೇ ಸರ್ಕಾರ ಮಾಡಿದ ಎಡವಟ್ಟಿನಿಂದ ಇವತ್ತು ಈ ಪರಿಸ್ಥಿತಿ ಬಂದಿದೆ ಎಂದು ಕಾಂಗ್ರೆಸ್ ವಿರುದ್ದ ಕಿಡಿಕಾರಿದ್ರು. ಇದನ್ನೂ ಓದಿ : – ಸಂಪುಟದಲ್ಲಿ ಬದಲಾವಣೆ ಮಾಡುವುದು ಸಿಎಂ ವಿವೇಚನೆಗೆ ಬಿಟ್ಟ ವಿಚಾರ – ಅರುಣ್ ಸಿಂಗ್