ಶಿವಮೊಗ್ಗ (Shivamogga) ಹಾಗೂ ಶಂಕರ ಘಟ್ಟ (Shankara gatta) ದ ರಸ್ತೆ ಪಕ್ಕದಲ್ಲೇ ಹುಲಿ (Tiger) ಪ್ರತ್ಯಕ್ಷವಾಗಿ ಜನರಲ್ಲಿ ಆತಂಕ ಸೃಷ್ಟಿಸಿದೆ. ಈ ಹಿಂದೆ ಇದೇ ಪ್ರದೇಶದಲ್ಲಿ ಕಾಣಿಸಿಕೊಂಡಿದ್ದ ಆನೆ ಕುವೆಂಪು ವಿವಿಗೂ ನುಗ್ಗಿತ್ತು.
ಇದೀಗ ಹುಲಿ ಪತ್ತೆಯಾಗಿರೋದು ಜನರಲ್ಲಿ ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ. ಭದ್ರಾ ಅಭಯಾರಣ್ಯದಿಂದ ಆನೆ ಹಾಗೂ ಇತರೆ ವನ್ಯ ಜೀವಿಗಳು ಕಾಡಿನಿಂದ ನಾಡಿಗೆ ಲಗ್ಗೆ ಇಡುತ್ತಲೇ ಇವೆ. ಈ ಬಗ್ಗೆ ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಇದನ್ನೂ ಓದಿ : – ಕೊಡಗಿನ ರಾಮಕೋಲ್ಲಿಯಲ್ಲಿ ಜಲಸ್ಫೋಟ – 25 ಎಕರೆಯಷ್ಟು ಪ್ರದೇಶದ ಬೆಟ್ಟ ಬಿರುಕು