ತಮಿಳುನಾಡಿನಿಂದ ರಾಜ್ಯಸಭೆಗೆ ಸ್ಪರ್ಧಿಸಿದ್ದ ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಸೇರಿ ಎಲ್ಲಾ ಆರು ಅಭ್ಯರ್ಥಿಗಳೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
![](https://rajnewskannada.in/wp-content/uploads/2022/06/image-40.png)
ಪಿ. ಚಿದಂಬರಂ (ಕಾಂಗ್ರೆಸ್), ಥಾಂಜೈ ಎಸ್. ಕಲ್ಯಾಣಸುಂದರಂ, ಆರ್. ಗಿರಿರಾಜನ್ ಮತ್ತು ಕೆ.ಆರ್.ಎನ್. ರಾಜೇಶ್ ಕುಮಾರ್ (ಡಿಎಂಕೆ), ಸಿ. ವೆ. ಷಣ್ಮುಗಂ ಮತ್ತು ಆರ್. ಧರ್ಮಾರ್ (ಎಐಎಡಿಎಂಕೆ) ಅವರು ತಮಿಳುನಾಡಿನಿಂದ ಆಯ್ಕೆ ಆಗಿದ್ದಾರೆ. ರಾಜ್ಯಸಭೆ ಸದಸ್ಯರಾಗಿ ಚಿದಂಬರಂ ಅವರಿಗೆ ಇದು ಎರಡನೇ ಅವಧಿ. ಮೊದಲ ಅವಧಿಯಲ್ಲಿ ಅವರು ಮಹಾರಾಷ್ಟ್ರದಿಂದ ಆಯ್ಕೆ ಆಗಿದ್ದರು. ಇದನ್ನೂ ಓದಿ : – ಕುತೂಹಲ ಕೆರಳಿಸಿದ ರಾಜ್ಯಸಭೆ ಚುನಾವಣೆ – ಕಾಂಗ್ರೆಸ್ ಶಾಸಕರಿಗೆ ವಿಪ್ ಜಾರಿ
![](https://rajnewskannada.in/wp-content/uploads/2022/06/image-39-1024x569.png)
ನಾಮಪತ್ರಗಳನ್ನು ಹಿಂಪಡೆಯಲು ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ವರೆಗೆ ಸಮಯಾವಕಾಶ ನಿಗದಿಪಡಿಸಲಾಗಿತ್ತು. ಅವಧಿ ಮುಗಿದ ಬಳಿಕ ಅವಿರೋಧವಾಗಿ ಆಯ್ಕೆ ಆಗಿರುವ ಅಭ್ಯರ್ಥಿಗಳ ಹೆಸರುಗಳನ್ನು ಘೋಷಿಸಲಾಗಿದೆ.
ಇದನ್ನೂ ಓದಿ : – ಪ್ರತಿಪಕ್ಷಗಳ ಮಾತಿಗೆ ನಾನು ತಲೆ ಕೆಡಿಸಿಕೊಳ್ಳಲ್ಲ – ಬಸವರಾಜ್ ಹೊರಟ್ಟಿ