ಮುಂಬರುವ 2024ರ ಲೋಕಸಭೆ ಚುನಾವಣೆಗೆ ಸಜ್ಜಾಗುತ್ತಿರುವ ಕಾಂಗ್ರೆಸ್ (congress) ಎರಡು ಹೊಸ ತಂಡಗಳನ್ನು ರಚನೆ ಮಾಡಿದೆ. ರಾಜಕೀಯ ವ್ಯವಹಾರಗಳ ಗುಂಪು ಮತ್ತು ಟಾಸ್ಕ್ ಫೋರ್ಸ್ ರಚಿಸಿ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ( Sonia Gandhi) ಆದೇಶಿಸಿದ್ದಾರೆ.
![](https://rajnewskannada.in/wp-content/uploads/2022/05/WhatsApp-Image-2022-05-24-at-1.28.32-PM-2-706x1024.jpeg)
ಪಕ್ಷದ ನಾಯಕತ್ವದ ವಿರುದ್ಧ ಭಿನ್ನ ಧ್ವನಿ ಎತ್ತಿದ್ದ ಇಬ್ಬರು ನಾಯಕರಿಗೂ ರಾಜಕೀಯ ವ್ಯವಹಾರಗಳ ಗುಂಪಿನಲ್ಲಿ ಸ್ಥಾನ ನೀಡಲಾಗಿದೆ. ಭಿನ್ನಮತದ ಗುಂಪಿನ (ಜಿ-23) ಪ್ರಮುಖರಾದ ಗುಲಾಂ ನಬಿ ಆಜಾದ್ ಮತ್ತು ಆನಂದ್ ಶರ್ಮಾ(Anand Sharma) ಸ್ಥಾನ ಪಡೆದಿದ್ದು, ಈ ಮೂಲಕ ಪಕ್ಷದಲ್ಲಿನ ಭಿನ್ನಮತ ಶಮನಕ್ಕೆ ಸೋನಿಯಾ ಪ್ರಯತ್ನಿಸಿದ್ದಾರೆ ಎನ್ನಲಾಗಿದೆ. ರಾಜಕೀಯ ವ್ಯವಹಾರಗಳ ಗುಂಪಿನಲ್ಲಿ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಗುಲಾಂ ನಬಿ ಆಜಾದ್, ಅಂಬಿಕಾ ಸೋನಿ, ದಿಗ್ವಿಜಯ್ ಸಿಂಗ್, ಆನಂದ್ ಶರ್ಮಾ, ಕೆ.ಸಿ.ವೇಣುಗೋಪಾಲ್ ಮತ್ತು ಜಿತೇಂದ್ರ ಸಿಂಗ್ ಸೇರಿದಂತೆ ಒಟ್ಟು ಎಂಟು ಸದಸ್ಯರಿದ್ದಾರೆ.
![](https://rajnewskannada.in/wp-content/uploads/2022/05/WhatsApp-Image-2022-05-24-at-1.28.32-PM-1.jpeg)
ಟಾಸ್ಕ್ಫೋರ್ಸ್ನಲ್ಲಿ ಪಿ.ಚಿದಂಬರಂ, ಮುಕುಲ್ ವಾಸ್ನಿಕ್, ಜೈರಾಮ್ ರಮೇಶ್, ಕೆ.ಸಿ.ವೇಣುಗೋಪಾಲ್, ಅಜಯ್ ಮಕೇನ್, ಪ್ರಿಯಾಂಕಾ ಗಾಂಧಿ, ರಂದೀಪ್ ಸಿಂಗ್ ಸುರ್ಜೇವಾಲಾ ಮತ್ತು ಸುನೀಲ್ ಕಾನುಗೋಲು ಇದ್ದು ಪ್ರತಿಯೊಬ್ಬರಿಗೂ ನಿರ್ದಿಷ್ಟ ಜವಾಬ್ದಾರಿ ನೀಡಲಾಗಿದೆ ಎಂದು ಪಕ್ಷದ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪುನಶ್ಚೇತನಕ್ಕಾಗಿ ಸೋನಿಯಾ ಗಾಂಧಿ ಈ ತಂತ್ರ ರೂಪಿಸಿದ್ದಾರೆ.
ಇದನ್ನೂ ಓದಿ :- ಜಿಲ್ಲಾಪಂಚಾಯತ್ ತಾಲ್ಲೂಕ್ ಪಂಚಾಯತ್ ಚುನಾವಣೆಗೂ ಮುಹೂರ್ತ ಫಿಕ್ಸ್ – 12 ವಾರಗಳ ಗಡುವು ನೀಡಿದ ಹೈಕೋರ್ಟ್