ಕಾಂಗ್ರೆಸ್ ( congress ) ಅಧಿನಾಯಕಿ ಸೋನಿಯಾ ಗಾಂಧಿ ( soniya gandhi ) ವಿಜಯದಶಮಿ ಹಬ್ಬದ ಹಿನ್ನೆಲೆಯಲ್ಲಿ ಹೆಚ್.ಡಿ ಕೋಟಿ ( h.d kote ) ತಾಲ್ಲೂಕಿನಲ್ಲಿರುವ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ್ದಾರೆ.
ಕಬಿನಿ ಹಿನ್ನಿರಿನಲ್ಲಿರುವ ಭೀಮನಕೊಲ್ಲಿ ದೇವಸ್ಥಾನಕ್ಕೆ ಭೇಟಿ ನೀಡಿದ ಸೋನಿಯಾ ಗಾಂಧಿ ಮಹದೇಶ್ವರನ ದರ್ಶನ ಪಡೆದರು. ಕಬಿನಿ ( kabini )ಹಿನ್ನಿರಿನಲ್ಲಿರುವ ಮಹದೇಶ್ವರ ದೇವಸ್ಥಾನಕ್ಕೆ 500 ವರ್ಷಗಳ ಇತಿಹಾಸವಿದೆ. ಇಲ್ಲಿ ದೇವರ ಮೂರ್ತಿಯನ್ನು ತಂದು ಪ್ರತಿಷ್ಠೆ ಮಾಡಿದ್ದಲ್ಲ, ಇದು ಉದ್ಭವ ಮೂರ್ತಿ ಎಂಬ ನಂಬಿಕೆಯಿದೆ. ಸೋನಿಯಾ ಗಾಂಧಿ ನಾಳೆ ಬೆಳಗ್ಗೆ ಮಂಡ್ಯ ಜಿಲ್ಲೆ ಪಾಂಡವಪುರದಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಇದನ್ನೂ ಓದಿ :- ನಂದಿ ಧ್ವಜ ಪೂಜೆಯಲ್ಲಿ ಭಾಗಿಯಾದ ಸಿಎಂ ಬೊಮ್ಮಾಯಿ