ಗಲಭೆಗಳಲ್ಲಿ ಭಾಗಿಯಾದ ಆರೋಪಿಗಳಿಗೆ ಸೇರಿದ ಅಕ್ರಮ ಕಟ್ಟಡಗಳನ್ನು ಉತ್ತರ ಪ್ರದೇಶದಲ್ಲಿ (Uttar pradesh) ಬುಲ್ಡೋಜರ್ಗಳಿಂದ (Bulldozer) ಕೆಡವಲಾಗುತ್ತಿದೆ. ಸರ್ಕಾರದ (Government) ಈ ನಡೆಗೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂಕೋರ್ಟ್ (Supreme court) ನೋಟಿಸ್ ಜಾರಿ ಮಾಡಿದೆ. ಮೂರು ದಿನಗಳಲ್ಲಿ ಅಫಿಡವಿಟ್ (Affidavit) ಸಲ್ಲಿಸುವಂತೆ ಕೋರ್ಟ್ ಸೂಚನೆ ನೀಡಿದೆ.
![](https://rajnewskannada.in/wp-content/uploads/2022/06/image-262.png)
ನಿರ್ದಿಷ್ಟ ಸಮುದಾಯವನ್ನು ಉತ್ತರ ಪ್ರದೇಶ ಸರ್ಕಾರ ಗುರಿ ಮಾಡುತ್ತಿದೆ. ನಿರ್ದಿಷ್ಟ ಸಮುದಾಯದವರ ಆಸ್ತಿಗಳನ್ನು ನೆಲಸಮ ಮಾಡುತ್ತಿದೆ. ಈ ತೆರವು ಕಾರ್ಯಾಚರಣೆಗೂ ಮುನ್ನ ತಮಗೆ ಯಾವುದೇ ನೋಟಿಸ್ ನೀಡುತ್ತಿಲ್ಲ ಎಂದು ಆರೋಪಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ, ಸುಪ್ರೀಂಕೋರ್ಟ್ ಈ ನಿರ್ದೇಶನ ಕೊಟ್ಟಿದೆ.
ತೆರವು ಕಾರ್ಯಾಚರಣೆಗಳು ಕಾನೂನಿಗೆ ಅನುಗುಣವಾಗಿ ನಡೆಯಬೇಕು. ಅವುಗಳು ಪ್ರತೀಕಾರದ ಕ್ರಮವಾಗಬಾರದು” ಎಂದು ಸುಪ್ರೀಂಕೋರ್ಟ್ ಹೇಳಿದೆ. ಇದನ್ನೂ ಓದಿ : – ಗುಬ್ಬಿಯಲ್ಲಿ ಡಿಎಸ್ ಎಸ್ ಮುಖಂಡ ಬರ್ಬರ ಹತ್ಯೆ – ಪೊಲೀಸರಿಂದ ತನಿಖೆ ಚುರುಕು
![](https://rajnewskannada.in/wp-content/uploads/2022/06/image-263-1024x683.png)
ಎಲ್ಲವೂ ನ್ಯಾಯಸಮ್ಮತವಾಗಿ ಕಾಣಬೇಕು. ಕಾನೂನಿಗೆ ಅನುಗುಣವಾಗಿ ಅಧಿಕಾರಿಗಳು ವರ್ತಿಸುತ್ತಾರೆ ಎಂದು ನಾವು ನಿರೀಕ್ಷಿಸುತ್ತೇವೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಸುರಕ್ಷತೆ ಕಾಪಾಡಬೇಕು” ಎಂದು ಹೇಳಿದೆ. ಪ್ರಕರಣದ ಮುಂದಿನ ವಿಚಾರಣೆಯನ್ನು ಮಂಗಳವಾರಕ್ಕೆ ನಿಗದಿಪಡಿಸಲಾಗಿದೆ. ರಾಜ್ಯ ಸರ್ಕಾರ ಹಾಗೂ ಪ್ರಯಾಗ್ರಾಜ್ ಮತ್ತು ಕಾನ್ಪುರ ಜಿಲ್ಲಾಡಳಿತಗಳಿಂದ ಸುಪ್ರೀಂಕೋರ್ಟ್ ಉತ್ತರ ಕೇಳಿದೆ. “ಸರ್ಕಾರಕ್ಕೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶವೂ ಸಿಗಲಿದೆ. ಇದನ್ನೂ ಓದಿ: – AGNIPATH – ಅಗ್ನಿಪಥ’ ಯೋಜನೆಗೆ ತೀವ್ರ ವಿರೋಧ-ರಾಜನಾಥ್ ಸಿಂಗ್ ಗೆ ವರುಣ್ ಗಾಂಧಿ ಪತ್ರ