ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ – ಇತಿಹಾಸವನ್ನು ಯಾರೂ ತಿದ್ದಬಾರದು – ಯದುವೀರ್ ಒಡೆಯರ್ ಪ್ರತಿಕ್ರಿಯೆ

ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ ಕುರಿತಂತೆ ಮೈಸೂರಿನ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪ್ರತಿಕ್ರಿಯಿಸಿದ್ದಾರೆ.

ಲೆಫ್ಟು ಬೇಡ, ರೈಟೂ ಬೇಡ. ಇತಿಹಾಸವನ್ನು ಇತಿಹಾಸವಾಗಿಯೇ ಭೋದಿಸಿ. ಮಕ್ಕಳಿಗೆ ಸರಿಯಾದ ಇತಿಹಾಸ ಹೇಳಿಕೊಡಬೇಕು. ಇತಿಹಾಸವನ್ನು ತಿದ್ದಬಾರದು. ಮಕ್ಕಳಿಗೆ ಪ್ರಸ್ತುತ ಕಾಲಕ್ಕೆ ಅನುಗುಣವಾಗಿ ಪಠ್ಯ ಅಳವಡಿಸಬೇಕು ಎಂದು ಯದುವೀರ್ ಸಲಹೆ ನೀಡಿದ್ದಾರೆ. ಇದೇ ವೇಳೆ ಪಾರಂಪರಿಕ ಕಟ್ಟಡಗಳ ಉಳಿವಿಗೆ ಟೆಂಡರ್ ಪ್ರಕ್ರಿಯೆ ಬದಲಾಗಬೇಕು ಎಂದು ಯದುವೀರ್ ತಿಳಿಸಿದ್ದಾರೆ. ಇದನ್ನೂ ಓದಿ : – ರಾಜ್ಯಸಭೆಗೆ ಬಿಜೆಪಿಯಿಂದ ಮೂವರು ಸದಸ್ಯರನ್ನ ಕಳಿಸ್ತೇವೆ – ಯಡಿಯೂರಪ್ಪ ಭರವಸೆ

ಈಗಿರುವ ಟೆಂಡರ್ ಪ್ರಕ್ರಿಯೆ ಪ್ರಕಾರ, ಕಟ್ಟಡವನ್ನು ನೆಲಸಮ ಮಾಡುವುದು ಮತ್ತು ಮರು ನಿರ್ಮಾಣ ಮಾಡುವುದು ಅಂತ ಮಾತ್ರ ಇದೆ. ಪಾರಂಪರಿಕ ಕಟ್ಟಡಗಳನ್ನು ಪುನಶ್ಚೇತನಗೊಳಿಸಲು ಅವಕಾಶ ಕಲ್ಪಿಸಬೇಕು. ಆಯುರ್ವೇದಿಕ್ ಆಸ್ಪತ್ರೆ ಚೆನ್ನಾಗಿ ಪುನಶ್ಚೇತನವಾಗಿದೆ. ಕೇವಲ ಸ್ಮಾಕರವಾಗಿಲ್ಲ, ಜನರಿಗೆ ಬಳಕೆ ಆಗುತ್ತಿದೆ. ಪಾರಂಪರಿಕ ಕಟ್ಟಡಗಳನ್ನು ಉಳಿಸುವ ನಿಟ್ಟಿನಲ್ಲಿ ಈ ಕಟ್ಟಡ ಮಾದರಿ ಆಗಬೇಕು ಎಂದು ಹೇಳಿದ್ರು.

ಇದನ್ನೂ ಓದಿ : –  ರಾಜ್ಯಸಭೆಗೆ ಬಿಜೆಪಿಯಿಂದ ಮೂವರು ಸದಸ್ಯರನ್ನ ಕಳಿಸ್ತೇವೆ – ಯಡಿಯೂರಪ್ಪ ಭರವಸೆ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!