ಮೈಸೂರು ಜಿಲ್ಲೆಯ ಕೆ.ಆರ್. ನಗರ ( k.r nagara ) ದಲ್ಲಿ ಜನರ ನಿದ್ದೆಗೆಡಿಸಿದ್ದ ಚಿರತೆಯನ್ನು ಕೊನೆಗೂ ಸೆರೆಹಿಡಿಯಲಾಗಿದೆ. ಇಂದು ಬೆಳಗ್ಗೆ ಕೆ.ಆರ್ ನಗರದಿಂದ ಮುಳ್ಳೂರಿಗೆ ಹೋಗುವ ರಸ್ತೆಯಲ್ಲಿ ಕಾಣಿಸಿಕೊಂಡಿದ್ದ ಚಿರತೆ, ರಸ್ತೆಯಲ್ಲಿ ಸಿಕ್ಕ ಸಿಕ್ಕವರ ಮೇಲೆ ದಾಳಿ ನಡೆಸಿ ಜನರಲ್ಲಿ ಆತಂಕ ಮೂಡಿಸಿತ್ತು.
ಚಿರತೆ ದಾಳಿಯಿಂದ ಬೆಚ್ಚಿ ಬಿದ್ದಿರುವ ಕೆ.ಆರ್ ನಗರ ಪಟ್ಟಣ ನಿವಾಸಿಗಳು ಮನೆಯಿಂದ ಆಚೆ ಬರಲು ಹೆದರುವ ಪರಿಸ್ಥಿತಿ ಉಂಟಾಗಿತ್ತು. ಗುರುವಾರ ರಾತ್ರಿಯೇ ಕೆ.ಆರ್ ನಗರ ಪಟ್ಟಣಕ್ಕೆ ಬಂದಿದ್ದ ಚಿರತೆ ರಸ್ತೆಯಲ್ಲಿ ಓಡಾಡಿತ್ತು. ಇದನ್ನೂ ಓದಿ : – ಗುಜರಾತ್ ಮುಖ್ಯಮಂತ್ರಿ ಅಭ್ಯರ್ಥಿ ಘೋಷಿಸಿದ ಆಮ್ ಆದ್ಮಿ ಪಕ್ಷ
ರಸ್ತೆ ಮಧ್ಯೆ ಕುಳಿತಿರುವ ಚಿರತೆಯನ್ನು ಕಂಡು ಭಯಭೀತರಾದ ಜನರು ಅರಣ್ಯ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದಿದ್ದರು. 2 ಗಂಟೆಯ ಕಾರ್ಯಾಚರಣೆ ಬಳಿಕ ಆ ಚಿರತೆಗೆ ಅರಿವಳಿಕೆ ಮದ್ದು ನೀಡಿ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆ ಸೆರೆ ಹಿಡಿದಿದ್ದಾರೆ.
ಇದನ್ನೂ ಓದಿ : – 500 ಕೋಟಿ ರೂ. ಬಜೆಟ್ ನ ‘ಆದಿಪುರುಷ್’ ಚಿತ್ರಕ್ಕೆ ರೀಶೂಟ್ – ಮತ್ತೆ ಹೆಚ್ಚಿದ ಪ್ರಭಾಸ್ ಸಿನಿಮಾ ಬಜೆಟ್