ರಾಜಕೀಯ ನಿರ್ಧಾರದ ಕುರಿತು ನಾಳೆ ಜನಾರ್ದನರೆಡ್ಡಿ ಸುದ್ದಿಗೋಷ್ಠಿ ವಿಚಾರಕ್ಕೆ ಸಂಬಂಧಿಸಿದಂತೆ ಬಳ್ಳಾರಿ ( BELLARI ) ಯಲ್ಲಿ ಸಾರಿಗೆ ಸಚಿವ ಬಿ. ಶ್ರೀರಾಮುಲು ( SRI RAMULU ) ಪ್ರತಿಕ್ರಿಯೆ ನೀಡಿದ್ದಾರೆ. ಜನಾರ್ದನರೆಡ್ಡಿ ಈ ಭಾಗದ ಹಿರಿಯ ನಾಯಕರು. ಪಕ್ಷದ ಹಿರಿಯ ನಾಯಕರು ಮನವೊಲಿಸುವ ಕೆಲಸ ಮಾಡಿದ್ದಾರೆ.
ಜನಾರ್ದನರೆಡ್ಡಿ ಅವರನ್ನು ಬಿಜೆಪಿ ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ. ಜನಾರ್ದನ ರೆಡ್ಡಿ ಅವರ ಬೇಡಿಕೆಗಳ ಬಗ್ಗೆ ಸಿಎಂ ಬೊಮ್ಮಾಯಿ ಮಾತನಾಡಿದ್ದಾರೆ. ರಾಷ್ಟ್ರೀಯ ಅಧ್ಯಕ್ಷರ ಗಮನಕ್ಕೆ ಕೂಡ ತರಲಾಗಿದೆ. ಪಕ್ಷದ ನಾಯಕರು ಜನಾರ್ದನರೆಡ್ಡಿ ಅವರನ್ನ ಬಿಜೆಪಿಯಲ್ಲಿಯೇ ಉಳಿಸಿಕೊಳ್ಳಲಿದ್ದಾರೆ ಎಂದು ಹೇಳಿದ್ರು.
ಇದನ್ನು ಓದಿ :- ಸಿಎಂ ಬೊಮ್ಮಾಯಿ ನಿವಾಸಕ್ಕೆ ಕೇಂದ್ರ ಸಚಿವ ಜೋಶಿ ಭೇಟಿ…!