PFI ಬ್ಯಾನ್ ಮಾಡುವುದರ ಮೂಲಕ ರಾಷ್ಟ್ರ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಕೊಂಡವರಿಗೆ ಎಚ್ಚರಿಕೆಯ ಸಂದೇಶ ರವಾನಿಸಲಾಗಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ( prahalad joshi ) ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ರಾಷ್ಟ್ರೀಯ ಸುರಕ್ಷತೆಯೇ ಸರ್ವೋಚ್ಛ ಆದ್ಯತೆಯಾಗಿದೆ. ಸಂಘಟನೆಯ ನಿಷೇಧದಿಂದ ರಾಷ್ಟ್ರೀಯ ಭದ್ರತೆ ಮತ್ತು ಸಾರ್ವಭೌಮತೆಗೆ ಅಪಾಯಕಾರಿಯಾಗಿದ್ದ ಚಟುವಟಿಕೆಗಳು ಸ್ಥಗಿತಗೊಳ್ಳಲಿವೆ. ಇದನ್ನೂ ಓದಿ: – ದೇಶದಲ್ಲಿ PFI ಬ್ಯಾನ್ ಚರ್ಚೆ ಹೊಸದಲ್ಲ – ಬಿ.ಕೆ ಹರಿಪ್ರಸಾದ್
ನಮ್ಮ ದೇಶ ಸುರಕ್ಷತೆಗೆ ಕೇಂದ್ರ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವುದಿಲ್ಲ ಎಂದು ಪ್ರಲ್ಹಾದ್ ಜೋಶಿ ಟ್ವೀಟ್ ಮೂಲಕ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ : – ನಿಮಗೆ ತಾಕತ್ತು ದಮ್ಮು ಇದ್ದರೆ ನಿಮ್ಮ ಪಕ್ಷದ ಶಾಸಕರನ್ನು ನಿಮ್ಮ ಪಕ್ಷದಲ್ಲಿ ಇಟ್ಟುಕೊಳ್ಳಿ – ಲಕ್ಷಣ್ ಸವದಿ