ಇಂದು ನಾಳೆ ಕೈ ಶಿಬಿರದಲ್ಲಿ ನಡೆಯಲಿದೆ ಚಿಂತನ ಮಂಥನ

ತಳಮಟ್ಟದಲ್ಲಿ ಪಕ್ಷವನ್ನು ಬಲಪಡಿಸುವುದು ಹಾಗೂ ಸೈದ್ಧಾಂತಿಕ ತಲಹದಿಯಲ್ಲಿ ಸಂಘಟನೆಯನ್ನು ಮಾಡುವ ನಿಟ್ಟಿನಲ್ಲಿ ರಾಜ್ಯ ಮಟ್ಟದ 2 ದಿನಗಳ ಕಾಲ ಚಿಂತನ ಶಿಬಿರವನ್ನು ಕಾಂಗ್ರೆಸ್ ಹಮ್ಮಿಕೊಂಡಿದೆ. ಗುರುವಾರ ಹಾಗೂ ಶುಕ್ರವಾರ ಬೆಂಗಳೂರಿನ ಹೊರ ವಲಯದ ಕ್ಲಾಕ್ ಎಕ್ಸೋಟಿಕಾ ರೆಸಾರ್ಟ್ ನಲ್ಲಿ ಈ ಶಿಬಿರ ನಡೆಯಲಿದೆ.

ಈ ಹಿಂದೆ ರಾಜಸ್ಥಾನದ ಉದಯ ಪುರದಲ್ಲಿ ರಾಷ್ಟ್ರೀಯ ಮಟ್ಟದ ಕಾಂಗ್ರೆಸ್ ಚಿಂತನಾ ಶಿಬಿರ ನಡೆದಿತ್ತು. ಈ ಶಿಬಿರದಲ್ಲಿ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ಕೈಗೊಳ್ಳಬೇಕಾದ ಕಾರ್ಯಕ್ರಮಗಳು ಹಾಗೂ ಪಕ್ಷದ ಬಲವರ್ಧನೆಯ ನಿಟ್ಟಿನಲ್ಲಿ ಮಾಡಬೇಕಾಗಿರುವ ಕಾರ್ಯತಂತ್ರಗಳ ಬಗ್ಗೆ ಚರ್ಚೆ ನಡೆದಿತ್ತು. ಇದನ್ನೂ ಓದಿ : – ಕುಣಿಗಲ್ ತಾಲೂಕಿನ ಅಭಿವೃದ್ಧಿ ಉದ್ದೇಶದಿಂದ ನಾನು ಹೇಳಿದ್ದೇನೆ – ಶಾಸಕ ಡಾ. ರಂಗನಾಥ್

ಶಿಬಿರದಲ್ಲಿ ಭಾಗಿಯಾದ ರಾಜ್ಯದ ಪ್ರಮುಖರಿಗೆ ಈ ನಿಟ್ಟಿನಲ್ಲಿ ಮಹತ್ವದ ಜವಾಬ್ದಾರಿಯನ್ನು ನೀಡಲಾಗಿತ್ತು. ಅದರಂತೆ ಅದನ್ನು ಅನುಷ್ಠಾನ ಮಾಡುವ ನಿಟ್ಟಿನಲ್ಲಿ ಎರಡು ದಿನಗಳ ಕಾಲ ರಾಜ್ಯ ಮಟ್ಟದ ಚಿಂತನ ಶಿಬಿರ ನಡೆಯಲಿದೆ. ಈ ಶಿಬಿರದಲ್ಲಿ ರಾಜ್ಯ ಮಟ್ಟದ ಕಾಂಗ್ರೆಸ್ ಪದಾಧಿಕಾರಿಗಳು ಭಾಗಿಯಾಗಲಿದ್ದಾರೆ. ಒಟ್ಟು ಐನೂರು ಮಂದಿ ಪದಾಧಿಕಾರಿಗಳು ಎರಡು ದಿನಗಳ ಕಾಲ ಶಿಬಿರದಲ್ಲಿ ಭಾಗಿಯಾಗಲಿದ್ದಾರೆ.

ಇದನ್ನೂ ಓದಿ : – RS ELECTION – ರಾಜ್ಯಸಭೆ ಚುನಾವಣೆ- ಕರ್ನಾಟಕಕ್ಕೆ ಬಿಜೆಪಿ ಉಸ್ತುವಾರಿ ಕಿಶನ್ ರೆಡ್ಡಿ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!