ಹಠ ಬಿಟ್ಟು ಕರ್ತವ್ಯಕ್ಕೆ ಹಾಜರಾಗಿ: ಸಿಎಂ ಬಿಎಸ್ ವೈ

ಜನರು ಸಂಕಷ್ಟದಲ್ಲಿ ಇರುವ ಈ ಸಮಯದಲ್ಲಿ ಸಾರಿಗೆ ನೌಕರರು ಹಠ ಬಿಟ್ಟು ಕರ್ತವ್ಯಕ್ಕೆ ಹಾಜರಾಗಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಾರಿಗೆ ನೌಕರರಲ್ಲಿ ಮನವಿ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆದಾಯದಲ್ಲಿ ಶೇ. 86 ರಷ್ಟು ಭಾಗ ಸರ್ಕಾರಿ ನೌಕರಿಗೆ ವೇತನ, ಪಿಂಚಣಿ ಇತರೆಗೆ ಖರ್ಚಾಗುತ್ತಿದೆ. ಈಗಾಗಲೇ 9 ಬೇಡಿಕೆಗಳ ಪೈಕಿ 8 ಬೇಡಿಕೆಗಳನ್ನು ಈಡೇರಿಸಿದ್ದೇವೆ ಎಂದರು.

ಇವತ್ತಿನ ಪರಿಸ್ಥಿತಿಯಲ್ಲಿ 6ನೇ ವೇತನ ಆಯೋಗ ಶಿಫಾರಸು ಸಾಧ್ಯವೇ ಇಲ್ಲ. ಉಳಿದಂತೆ ಯಾವುದರಲ್ಲಿ ಲೋಪದೋಷ ಇದ್ದರೆ ಹೇಳಿ ಸರಿಪಡಿಸೋಣ. ಅದನ್ನ ಬಿಟ್ಟು ಈ ರೀತಿ ಹಠ ಮಾಡಬಾರದು ಎಂದು ಅವರು ಮನವಿ ಮಾಡಿದರು.

ವೇತನ ಆಯೋಗ ಜಾರಿ ಮಾಡಲು ಸಾಧ್ಯವೇ ಇಲ್ಲ ಅಂದ ಮೇಲೆ ಹಠ ಮಾಡುವುದು ಸರಿಯಲ್ಲ. ಈಗಲಾದರೂ ಅರ್ಥ ಮಾಡ್ಕೊಂಡು ಕೆಲಸಕ್ಕೆ ಬನ್ನಿ. ಸಾರ್ವಜನಿಕರಿಗೆ ತೊಂದರೆ ಆಗದಂತೆ ನಡೆದುಕೊಳ್ಳಿ ಎಂದು ಅವರು ಹೇಳಿದರು.

ಯಾರ ಜೊತೆ ಮಾತನಾಡಬೇಕು. ಯಾರದ್ದೂ ಮಾತಿಗೆ ಬಲಿಯಾಗಿ ಈ ರೀತಿ ಹಠ ಮಾಡೋದು ಸರಿಯಲ್ಲ ಎಂದು ಹೇಳುವ ಮೂಲಕ ಪರೋಕ್ಷವಾಗಿ ಕೋಡಿಹಳ್ಳಿ ನೇತೃತ್ವದ ಸಂಘಟನೆಯ ಜೊತೆ ಮಾತಡಲ್ಲ ಎಂದು ಯಡಿಯೂರಪ್ಪ ಸ್ಪಷ್ಟಪಡಿಸಿದರು.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!