ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲ್ಲೂಕಿನ ಹಲವು ಹಳ್ಳಿಗಳಲ್ಲಿ ಭೂಮಿ ಕಂಪಿಸಿದ ಅನುಭವ ಉಂಟಾಗಿದ್ದು, ಭೂಮಿಯಿಂದ ಕೇಳಿಬಂದ ಭಾರೀ ಶಬ್ದಕ್ಕೆ ಜನ ಬೆಚ್ಚಿಬಿದ್ದಿದ್ದಾರೆ.
![](https://rajnewskannada.in/wp-content/uploads/2022/05/WhatsApp-Image-2022-05-16-at-7.41.43-AM-1-768x1024.jpeg)
ಇಲ್ಲಿನ ಪೆದ್ದ ತುಮಕೇಪಲ್ಲಿ, ಲಘುಮದ್ದೇಪಲ್ಲಿ, ಗರ್ರಾಲದಿನ್ನೆ, ಶಂಖವಾರಂಪಲ್ಲಿ, ಯಲ್ಲಂಪಲ್ಲಿ, ಮದ್ದಲಖಾನೆ, ಈರಗಂಟಪಲ್ಲಿ ಹಾಗೂ ಟೆಂಕಮಾಕಲಪಲ್ಲಿಯಲ್ಲಿ ಭೂಮಿ ಕಂಪಿಸಿದ ಅನುಭವ ಆಗಿದ್ದು, ಭಾರೀ ಶಬ್ಧ ಕೇಳಿಬಂದಿದೆ. ಇದನ್ನೂ ಓದಿ : – ಕೃಷಿಹೊಂಡಕ್ಕೆ ವಿಷ ಸಿಂಪಡಣೆ – ಮೀನುಗಳು ಸಾವು
![CKB](https://publictvin.b-cdn.net/wp-content/uploads/2022/05/CKB-1.jpg)
9:30 ಹಾಗೂ 9:45 ಗಂಟೆ ಸುಮಾರಿಗೆ ಎರಡು ಬಾರಿ ಶಬ್ಧ ಕೇಳಿಬಂದಿದೆ. ಇದರಿಂದ ಗ್ರಾಮಸ್ಥರಲ್ಲಿ ಭಯದ ವಾತಾವರಣ ಉಂಟಾಗಿದ್ದು, ಆತಂಕದಿಂದಲೇ ಕಾಲ ಕಳೆಯುವಂತಾಗಿದೆ.
ಇದನ್ನೂ ಓದಿ : – ಕರ್ನಾಟಕದ ಎಲ್ಲಾ ಮಕ್ಕಳಿಗೂ ಶಾಲೆಗೆ ಸ್ವಾಗತ ಕೋರುತ್ತೇನೆ – ಸಿಎಂ ಬೊಮ್ಮಾಯಿ