ತ್ರಿಪುರಾ ಮುಖ್ಯಮಂತ್ರಿ ಬಿಪ್ಲವ್ ಕುಮಾರ್ ದೇವ್ (BIPLAV KUMAR DEV ) ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರ ಸಲ್ಲಿಸಿರುವುದನ್ನು ಬಿಜೆಪಿ ಮೂಲಗಳು ಖಚಿತಪಡಿಸಿವೆ. ಶುಕ್ರವಾರ ದಿಲ್ಲಿಗೆ ಭೇಟಿ ನೀಡಿದ್ದ ದೇವ್ ಅವರು, ಶನಿವಾರ ಬೆಳಿಗ್ಗೆ ಅಗರ್ತಲಾಕ್ಕೆ ಮರಳಿದ್ದರು.
![](https://rajnewskannada.in/wp-content/uploads/2022/05/WhatsApp-Image-2022-05-14-at-5.16.55-PM.jpeg)
ದಿಲ್ಲಿಯಿಂದ ವಾಪಸಾಗುತ್ತಿದ್ದಂತೆಯೇ ಅವರು ರಾಜೀನಾಮೆ ನೀಡಿರುವುದು ಅಚ್ಚರಿ ಮೂಡಿಸಿದೆ. ಮುಂದಿನ ವರ್ಷದ ಆರಂಭದಲ್ಲಿ ತ್ರಿಪುರಾದಲ್ಲಿ ವಿಧಾನಸಭೆ ಚುನಾವಣೆ ನಡೆಯಬೇಕಿದೆ. ಅದಕ್ಕೂ ಮೊದಲೇ ನಾಯಕತ್ವ ಬದಲಾವಣೆ ಕುತೂಹಲ ಮೂಡಿಸಿದೆ. ಬಿಜೆಪಿ ನಾಯಕ ದೇವ್ ಅವರು ರಾಜ್ಯಪಾಲ ಸತ್ಯದೇವ್ ನಾರಾಯಣ್ ಆರ್ಯ ಅವರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಇದನ್ನೂ ಓದಿ : – ವಿಧಾನ ಪರಿಷತ್ತಿನ ಏಳು ಸ್ಥಾನಗಳಲ್ಲಿ ಬಿಜೆಪಿ ಶಾಸಕರಿಗೆ ನಾಲ್ಕು ಸ್ಥಾನಗಳು