TRS BREAKING – ತೆಲಂಗಾಣದಲ್ಲಿ TRS ಶಾಸಕರ ಖರೀದಿಗೆ ಯತ್ನ- 15 ಕೋಟಿ ಜೊತೆ ನಾಲ್ವರು ವಶಕ್ಕೆ

ತೆಲಂಗಾಣ (Telangana) ದಲ್ಲಿ TRS ಶಾಸಕರನ್ನು ಖರೀದಿಸಲು ಯತ್ನಿಸಿದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಆಪರೇಷನ್ ಕಮಲಕ್ಕಾಗಿ 15 ಕೋಟಿ ರೂ. ತಂದ ಆರೋಪದ ಮೇಲೆ ಹಣದ ಸಮೇತ ಮೂವರನ್ನು ಪೊಲೀಸರು (Police) ವಶಕ್ಕೆ ಪಡೆದಿದ್ದಾರೆ.

ತೆಲಂಗಾಣ (Telangana) ದಲ್ಲಿ TRS ಶಾಸಕರನ್ನು ಖರೀದಿಸಲು ಯತ್ನಿಸಿದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಆಪರೇಷನ್ ಕಮಲಕ್ಕಾಗಿ 15 ಕೋಟಿ ರೂ. ತಂದ ಆರೋಪದ ಮೇಲೆ ಹಣದ ಸಮೇತ ಮೂವರನ್ನು ಪೊಲೀಸರು (Police) ವಶಕ್ಕೆ ಪಡೆದಿದ್ದಾರೆ.

ವಶಕ್ಕೆ ಒಳಗಾದವರನ್ನು ಹರಿಯಾಣ (Hariyana) ದ ಫರಿದಾಬಾದ್ನ ಅರ್ಚಕ ಸತೀಶ್ ಶರ್ಮಾ, ಅಲಿಯಾಸ್ ರಾಮಚಂದ್ರ ಭಾರತಿ, ತಿರುಪತಿಯ ಧರ್ಮದರ್ಶಿ ಡಿ ಸಿಂಹಯಾಜಿ ಮತ್ತು ಉದ್ಯಮಿ ನಂದಕುಮಾರ್ ಎಂದು ಗುರುತಿಸಲಾಗಿದೆ. ಹೈದರಾಬಾದ್ನ ಅಜೀಜ್ ನಗರದ ಫಾರ್ಮ್ ಹೌಸ್ನಲ್ಲಿ ಪೊಲೀಸರು 15 ಕೋಟಿ ನಗದು ಸೀಜ್ ಮಾಡಿದ್ದಾರೆ. ನಾಲ್ವರು ಟಿಆರ್ಎಸ್ ಶಾಸಕರನ್ನು ಖರೀದಿಸಲು ಹಣ ತಂದ ಆರೋಪದ ಮೇಲೆ ದೆಹಲಿಯಿಂದ ಬಂದಿದ್ದ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಪಕ್ಷಗಳನ್ನು ಬದಲಾಯಿಸಲು ಆಮಿಷ ಮತ್ತು ಲಂಚ ನೀಡಲಾಗುತ್ತಿದೆ ಎಂದು ಶಾಸಕರು ಪೊಲೀಸರಿಗೆ ಕರೆ ಮಾಡಿದ್ದರು. ಇದನ್ನೂ ಓದಿ :- ‘ಅಮ್ಮಾ, ಜಗತ್ತು ಏನು ಬೇಕಾದರೂ ಹೇಳಿಕೊಳ್ಳಲಿ, ನೀವು ಪ್ರೀತಿಗಾಗಿ ಎಲ್ಲವನ್ನೂ ಮಾಡಿದ್ದೀರಿ – ಪ್ರಿಯಾಂಕಾ ವಾದ್ರಾ ಭಾವನಾತ್ಮಕ ಪೋಸ್ಟ್

ಪಕ್ಷಗಳನ್ನು ಬದಲಾಯಿಸಲು ಅವರಿಗೆ ದೊಡ್ಡ ಮೊತ್ತದ ಹಣ, ಒಪ್ಪಂದಗಳು ಮತ್ತು ಹುದ್ದೆಗಳನ್ನು ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ತಾಂಡೂರು ಶಾಸಕ ಪೈಲಟ್ ರೋಹಿತ್ ರೆಡ್ಡಿ ಅವರ ಫಾರ್ಮ್ಹೌಸ್ನಲ್ಲಿ ಡೀಲ್ ನಡೆದಿದೆ ಎನ್ನಲಾಗಿದೆ. 2019 ರಿಂದ ಬಿಜೆಪಿಯು ತೆಲಂಗಾಣದಲ್ಲಿ ಆಪರೇಷನ್ ಕಮಲ ಪ್ರಾರಂಭಿಸಲು ಯತ್ನಿಸಿದೆ.

ಇದನ್ನೂ ಓದಿ :- ತಮಿಳಿನ ಸೂಪರ್ ಸ್ಟಾರ್ ನಟಿ ನಯ ನತಾರ ಬಾಡಿಗೆ ತಾಯಿ ವಿವಾದ ಸುಖಾಂತ್ಯ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!