ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ – ಗ್ರಾಪಂ ಅಧ್ಯಕ್ಷ ನಾಗೇಶ್ ಮೊಬೈಲ್ ವಶಕ್ಕೆ ಪಡೆದ ಉಡುಪಿ ಪೊಲೀಸರು

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ತನಿಖೆಗಾಗಿ ಉಡುಪಿ ಪೊಲೀಸರು ನಗರದ ಹಿಂಡಲಗಾ ಗ್ರಾಂ.ಪಂ ಅಧ್ಯಕ್ಷ ನಾಗೇಶ್ ಮನ್ನೋಳಕರ್ ಮೊಬೈಲ್ ವಶಕ್ಕೆ ಪಡೆದುಕೊಂಡಿದ್ದಾರೆ.

After accusing Minister Eshwarappa of corruption, Belagavi BJP worker ends  life | Deccan Herald

ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ವಿಚಾರಣೆಗಾಗಿ ಇನ್ಸ್ಪೆಕ್ಟರ್ ಶರಣಗೌಡ ಪಾಟೀಲ್ ನೇತೃತ್ವದ ತಂಡ ಮತ್ತೆ ತನಿಖೆ ಚುರುಕುಗೊಳಿಸಿದೆ. ಸಂತೋಷ್ ಪಾಟೀಲ್ ಮನೆಯನ್ನು ನಾಗೇಶ್ ಮನ್ನೋಳಕರ್, ಗ್ರಾ.ಪಂ.ಸದಸ್ಯ ಎನ್.ಎಸ್.ಪಾಟೀಲ್ ಸೇರಿ ಜಿಪಿಎ ಮಾಡಿಸಿಕೊಂಡಿದ್ದರು. ಇದನ್ನೂ ಓದಿ :- ಶಾಂತವೀರ ಮಹಾಸ್ವಾಮೀಜಿ ನಿಧನ – ಟ್ವೀಟ್‌ ಮೂಕಲ ಸಂತಾಪ ಸೂಚಿಸಿದ ಹೆಚ್.ಡಿ.ಕೆ

ಜಿಪಿಎ ಮಾಡಿಸಿಕೊಂಡಿದ್ದೇಕೆ? ಜಿಪಿಎ ಮಾಡಿಸಿಕೊಂಡು ಎಷ್ಟು ಹಣ ಕೊಟ್ಟಿದ್ದರು? 108 ಕಾಮಗಾರಿ ಆರಂಭಿಸಲು ಹೇಳಿದ್ದು ಯಾರು? ಎಂಬ ಬಗ್ಗೆ ಹೆಚ್ಚಿನ ವಿಚಾರಣೆ ನಡೆಸಿದ್ದಾರೆ. ಮತ್ತೊಂದೆಡೆ ಉಡುಪಿ ಪೊಲೀಸರು ನಾಗೇಶ್ ಮನ್ನೋಳಕರ್ ಮೊಬೈಲ್ನ್ನು ಅನಾಲಿಸಿಸ್ಗೆ ಕಳಿಸಿದ್ದಾರೆ. ಹಿಂಡಲಗಾ ಗ್ರಾ.ಪಂ 35 ಸದಸ್ಯರಿಗೂ ವಿಚಾರಣೆಗೆ ಹಾಜರಾಗಲು ಸೂಚನೆ ನೀಡಿದ್ದಾರೆ. ಪ್ರತಿಯೊಬ್ಬ ಸದಸ್ಯರನ್ನು ಪ್ರತ್ಯೇಕವಾಗಿ ಒನ್ ಟು ಒನ್ ವಿಚಾರಣೆ ನಡೆಸಲು ನಿರ್ಧರಿಸಿದ್ದಾರೆ.

ಇದನ್ನೂ ಓದಿ :- ಯುವತಿ ಮೇಲೆ ಆ್ಯಸಿಡ್ ದಾಳಿ ಪ್ರಕರಣ – ನಾಳೆಯೊಳಗೆ ಆರೋಪಿಯನ್ನ ಬಂದಿಸುತ್ತೇವೆ – ಡಾ. ಕೆ ಸುಧಾಕರ್

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!