ಬೆಂಗಳೂರಿನ ಈದ್ಗಾ ಮೈದಾನದಲ್ಲಿ ಗಣೇಶ ಕೂರಿಸೋ ಬಗ್ಗೆ ಇನ್ನೂ ನಿರ್ಧಾರ ತೆಗೆದುಕೊಳ್ಳದ ಸರ್ಕಾರ

ಚಾಮರಾಜಪೇಟೆ ( chamarajpete ) ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಸಂಬಂಧಿಸಿದಂತೆ ಸಿಎಂ ಬೊಮ್ಮಾಯಿ ( basavaraj bommai ) ನಿವಾಸದಲ್ಲಿ ಕಂದಾಯ ಸಚಿವ ಆರ್ . ಅಶೋಕ್, ಬಿ.ಬಿ.ಎಂ.ಪಿ ಆಯುಕ್ತ ತುಷಾರ್ ಗಿರಿನಾಥ್, ಹಿರಿಯ ಪೊಲೀಸ್ ಅಧಿಕಾರಿ ಸಂದೀಪ್ ಪಾಟೀಲ್ , ಪ್ರತಾಪ್ ರೆಡ್ಡಿ ಸಭೆ ನಡೆಸಿದ್ರು.

ಸಭೆ ಬಳಿಕ ಮಾತನಾಡಿದ ಆರ್.ಅಶೋಕ್, ಬಿಬಿಎಂಪಿ ( bbmp ) ಹಾಗೂ ಪೊಲೀಸ್ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದೇನೆ. ಕೋರ್ಟ್ ಆದೇಶಗಳನ್ನ ಕೂಡ ಪರಿಶೀಲನೆ ಮಾಡಲಾಗಿದೆ. ಎಜಿ ಜೊತೆ ಕೂಡ ಮಾತನಾಡಿದ್ದೇವೆ. ಪೊಲೀಸ್ ಇಲಾಖೆ ಬಂದೋಬಸ್ತ್ ಬಗ್ಗೆ ಅವರು ಮಾತನಾಡಿದ್ದಾರೆ. 5 ಅರ್ಜಿಗಳನ್ನ ಪರಿಶೀಲನೆ ಮಾಡಿದ್ದೇವೆ. 2 ಅರ್ಜಿಗಳು ಮಾತ್ರ ಲೋಕಲ್ ನವರು ಕೊಟ್ಟಿದ್ದಾರೆ. ಇನ್ನು 2 ದಿನ ಅರ್ಜಿ ಕೊಡೋಕೆ ಅವಕಾಶ ಕೊಡುತ್ತೇವೆ ಎಂದು ತಿಳಿಸಿದ್ರು. ಇದನ್ನೂ ಓದಿ : – ಬಾಂಗ್ಲಾ ದೇಶದಲ್ಲಿ ವಿದ್ಯುತ್ ಕೊರತೆ, 4 ದಿನ ಮಾತ್ರ ಶಾಲೆ, ಕೇವಲ 7 ಗಂಟೆ ಬ್ಯಾಂಕ್ ಓಪನ್


ಮುಸ್ಲಿಂ ( muslim ) ಸಂಘಟನೆಗಳು ಈ ಮೈದಾನಕ್ಕೋಸ್ಕರ ಫೈಟ್ ಮಾಡ್ತಿದ್ದಾರೆ. ಅವರು ಸುಪ್ರೀಂಕೋರ್ಟ್ ಗೆ ಸೋಮವಾರ ಅಪೀಲ್ ಹೋಗ್ತಾರೆ ಅನ್ನೋ ಮಾಹಿತಿ ಇದೆ. ಹೀಗಾಗಿ ಸಾರ್ವಜನಿಕರಿಗೆ ಹೇಳ್ತಿದ್ದೇನೆ ಅರ್ಜಿ ಹಾಕೋರು ಹಾಕಬಹುದು. ಕಂದಾಯ ಸಚಿವನಾಗಿ ನಾನು ಆಮೇಲೆ ನಿರ್ಧಾರ ತೆಗೆದುಕೊಳ್ಳುತ್ತೇವೆ. ಸಿಎಂ ಜೊತೆ ಸುಮಾರು 2 ಗಂಟೆಗಳ ಕಾಲ ಇದರ ಬಗ್ಗೆ ಚರ್ಚೆ ನಡೆಸಿದ್ದೇನೆ. ಇಂದು ಸಿಎಂ ಸಭೆ ನಡೆಸುವಂತೆ ಸೂಚಿಸಿದ್ರು. ಅದರಂತೆ ಸಭೆ ಮಾಡಿದ್ದೇವೆ.

ಸಭೆಯಲ್ಲಿ ಗಣೇಶೋತ್ಸವ ಮಾಡೋದಾದರೇ ಹೇಗೆ ಮಾಡಬೇಕು. ಮುಂಜಾಗ್ರತಾ ಕ್ರಮಗಳೇನು ? ಎಲ್ಲಿ ಕೂರಿಸಬೇಕು, ಸಂಭ್ರಮಾಚರಣೆ ಜೊತೆಗೆ ಮೆರವಣಿಗೆ ಎಲ್ಲಿಂದ ಸಾಗಬೇಕು ಪ್ರತಿಯೊಂದರ ಬಗ್ಗೆ ಇವತ್ತು ಚರ್ಚೆ ಮಾಡಿದ್ದೇವೆ. ಆಚರಣೆ ಮಾಡಬೇಕಾದರೇ ಹೇಗೆ ಮಾಡಬೇಕು ಅನ್ನೋದರ ಬಗ್ಗೆ ಚರ್ಚೆಯಾಗಿದೆ ಎಂದು ತಿಳಿಸಿದ್ರು. 75 ವರ್ಷಗಳಿಂದ ವಿರೋಧ ಮಾಡ್ತಾ ಇದ್ದಾರೆ. ಕೋಳಿ ಕೇಳಿ ಮಸಾಲೆ ಅರಿಬೇಕಾ ಎಂದು ಜಮೀರ್ ( zameer ) ಹೇಳಿಕೆ ಅಶೋಕ್ ಟಾಂಗ್ ಕೊಟ್ಟಿದ್ದಾರೆ.

ಇದನ್ನೂ ಓದಿ : – ರಾಜ್ಯದ ಪ್ರತಿಷ್ಟಿತ ಸ್ವಾಮೀಜಿಯಿಂದ ವಸತಿ ನಿಲಯದ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ – ದೂರು ದಾಖಲು

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!