ಜ್ಞಾನವಾಪಿ ಮಸೀದಿ ವಿವಾದ – ತೀರ್ಪು ಕಾಯ್ದಿರಿಸಿದ ವಾರಾಣಾಸಿ ಕೋರ್ಟ್ – ನಾಳೆ ತೀರ್ಪು ಸಂಭವ

ವಾರಾಣಸಿಯ ಜ್ಞಾನವಾಪಿ ಮಸೀದಿಯಲ್ಲಿ ( gyanvapsi mosque )ಶಿವಲಿಂಗ ಪತ್ತೆಯಾಗಿದ್ದು ಮಸೀದಿ ಸರ್ವೇ ಕಾರ್ಯ ನಿಲ್ಲಿಸಬೇಕು ಎಂದು ಕೋರಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ವಾರಾಣಸಿ ಕೋರ್ಟ್ (varanasi court ) ತೀರ್ಪು ಕಾಯ್ದಿರಿಸಿದೆ.

ನಾಳೆ ಈ ಕುರಿತಂತೆ ಆದೇಶ ನೀಡುವ ಸಾಧ್ಯತೆ ಇದೆ. ಮಸೀದಿಯಲ್ಲಿ ಪತ್ತೆಯಾದ ಶಿವಲಿಂಗಕ್ಕೆ ಪೂಜೆ ಮಾಡಲು ಅವಕಾಶ ನೀಡಬೇಕು ಎಂದು ಕೋರಿ ಹಿಂದು ಪರರು ಅರ್ಜಿ ಸಲ್ಲಿಸಿದ್ದಾರೆ. ಇದಕ್ಕೆ ವಿರುದ್ಧವಾಗಿ ಮುಸ್ಲಿಂ ಸಂಘಟನೆ, ಮಸೀದಿ ಪರವಾಗಿ ಶಿವಲಿಂಗ ಪತ್ತೆಯಾದ ಜಾಗವನ್ನು ನಿರ್ಬಂಧಿಸಿದ್ದರ ವಿರುದ್ಧ ಅರ್ಜಿ ಸಲ್ಲಿಸಲಾಗಿದೆ. ಇಂದು ಕೋರ್ಟ್ ನಲ್ಲಿ ನಡೆದ ವಾದ – ಪ್ರತಿವಾದದ ವೇಳೆ ಮಸೀದಿ ಪರ ವಕೀಲರು, 1991 ರ ಪೂಜಾ ಸ್ಥಳಗಳ ಕಾಯ್ದೆಯನ್ನು ಉಲ್ಲೇಖಿಸಿ ಜ್ಞಾನವಾಪಿ ಸಮೀಕ್ಷೆ ಮತ್ತು ಪ್ರಕರಣವನ್ನು ಪರಿಗಣಿಸಲು ಕೋರಿದ್ದಾರೆ. ಇನ್ನೊಂದೆಡೆ ಶಿವಲಿಂಗ ಪತ್ತೆಯಾದ ಸ್ಥಳದಲ್ಲಿ ಪ್ರಾರ್ಥನೆ ಮಾಡಲಾಗಿದ್ದು ಇವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಬೇಕು ಎಂದು ಹಿಂದೂಪರ ವಕೀಲರು ವಾದಿಸಿದ್ದಾರೆ.

ವಾರಾಣಸಿ ಕೋರ್ಟ್ ನಾಳೆ ನೀಡಲಿರುವ ಆದೇಶದ ಮೇರೆಗೆ ಪ್ರಕರಣದ ವಿಚಾರಣೆ ಹೇಗೆ ಮುಂದುವರಿಯಲಿದೆ ಎಂಬುದು ನಿರ್ಧಾರವಾಗಲಿದೆ. ಸುಪ್ರೀಂಕೋರ್ಟ್ ನೀಡಿರುವ ಆದೇಶದ ಆದ್ಯತೆ ಮೇರೆಗೆ ಅರ್ಜಿಯ ವಿಚಾರಣೆ ನಡೆಸಬೇಕೆಂದು ಮುಸ್ಲಿಂ ಸಮಿತಿ ಪರ ವಕೀಲರು ವಾದ ಮಂಡಿಸಿದ್ದರು.ಜ್ಞಾನವಾಪಿ ಮಸೀದಿ ಪ್ರಕರಣದಲ್ಲಿ ಸಮೀಕ್ಷೆ ನಡೆಸಿರುವ ಆಯೋಗದ ವರದಿಯ ಅಂಶದ ಆಧಾರದ ಮೇಲೆ ವಿಚಾರಣೆ ನಡೆಸಬೇಕು ಎಂದು ಹಿಂದೂ ಪರ ವಕೀಲರು ಪ್ರತಿವಾದ ಮಂಡಿಸಿರುವುದಾಗಿ ತಿಳಿದು ಬಂದಿದೆ. ಮಸೀದಿಯನ್ನು ಸರ್ವೇ ಮಾಡಿ ಸಲ್ಲಿಸಲಾದ ವರದಿಯನ್ನು ಕೋರ್ಟ್ ಒಪ್ಪಿಕೊಂಡಿದೆ ಎಂದು ತಿಳಿದು ಬಂದಿದೆ. ಪ್ರಕರಣದ ಕುರಿತು ಸುಪ್ರೀಂಕೋರ್ಟ್ ನಲ್ಲಿ ನಡೆದ ವಿಚಾರಣೆಯಲ್ಲಿ ಶಿವಲಿಂಗ ಪತ್ತೆಯಾದ ಜಾಗವನ್ನು ರಕ್ಷಿಸಿ, ಮಸೀದಿಯಲ್ಲಿ ಪ್ರಾರ್ಥನೆಗೆ ಅಡ್ಡಿಯುಂಟಾಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿತ್ತು. ಇದನ್ನೂ ಓದಿ :- ಮೇಕೆದಾಟು ಪಾದಯಾತ್ರೆಯಲ್ಲಿ ನಿಯಮ ಉಲ್ಲಂಘನೆ ಆರೋಪ – ನಾಳೆ ವಿಚಾರಣೆಗೆ ಹಾಜರಾಗುವಂತೆ ಸಿದ್ದರಾಮಯ್ಯಗೆ ಸಮನ್ಸ್

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!