ಮಹರ್ಷಿ ವಾಲ್ಮೀಕಿ ಜಯಂತಿ (Valmiki jayanthi) ಆಚರಣೆ ಮಾಡದ ವಿಚಾರಕ್ಕೆ ಗ್ರಾಮ ಪಂಚಾಯತಿ (Gram panchayath) ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ದ ಆಕ್ರೋಶ ವ್ಯಕ್ತವಾಗಿದೆ. ವಾಲ್ಮೀಕಿ ಸಮುದಾಯದ ಜನರು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ಕೊಂಡಗೂಳಿ ಗ್ರಾಮದಲ್ಲಿ ವಾಲ್ಮೀಕಿ ಸಮುದಾಯದ ಜನರು ಹೆಚ್ಚಿದ್ದೇವೆ.
ಈ ಮೂಲಕ ನಮ್ಮ ಸಮುದಾಯಕ್ಕೆ ಗ್ರಾಮ ಪಂಚಾಯತಿ ಅಧಿಕಾರಿಗಳು ಸಿಬ್ಬಂದಿ ಅವಮಾನ ಮಾಡಿದ್ದಾರೆಂದು ಆಕ್ರೋಶ ಹೊರಹಾಕಿದ್ದಾರೆ. ಅಧಿಕಾರಿಗಳು ಹಾಗೂ ಸಿಬ್ಬಂದಿ ಮೇಲೆ ಸೂಕ್ತ ಕ್ರಮ ತೆಗದುಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಗ್ರಾಮ ಪಂಚಾಯತಿ ಕಚೇರಿಯಲ್ಲಿ ವಾಲ್ಮೀಕಿ ಸಮುದಾಯದವರೇ ವಾಲ್ಮೀಕಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ್ದಾರೆ. ಈ ಮೂಲಕ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಗ್ರಾಮಸ್ಥರು ಆಚರಣೆ ಮಾಡಿದ್ದಾರೆ.
ಇದನ್ನೂ ಓದಿ :- ಹೈಕೋರ್ಟ್ ಚಾಟಿ ಬೆನ್ನಲ್ಲೆ ಬಿಬಿಎಂಪಿ ಅಲರ್ಟ್ – ನಾಳೆಯಿಂದ ಬುಲ್ಡೋಜರ್ ಚಾಪ್ಟರ್ -2 ಶುರು..!