ಕರ್ನಾಟಕದಲ್ಲಿ ಬಿಜೆಪಿಯು ಅಧಿಕಾರಕ್ಕೆ ಬಂದಾಗಲೆಲ್ಲವೂ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ( B.C NAGESH ) ಹೇಳಿದ್ದಾರೆ. ವಿವೇಕ ಯೋಜನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,‘ವಿವೇಕ ಯೋಜನೆ’ಯು ಶಿಕ್ಷಣಕ್ಕೆ ಆದ್ಯತೆ ನೀಡುವ ಪ್ರಯತ್ನದ ಒಂದು ಭಾಗವಷ್ಟೇ ಆಗಿದೆ. ಮಕ್ಕಳಿಗೆ ವಿವೇಕಾನಂದರ ವಿಚಾರದ ಬಗ್ಗೆ ಪರಿಚಯವಾಗಬೇಕು. ಹೀಗಾಗಿ ವಿವೇಕ ಯೋಜನೆ ಎಂಬ ಹೆಸರನ್ನು ಇಡಲಾಗಿದೆ. ಎಲ್ಲಾ ತಾಲೂಕುಗಳಲ್ಲಿಯೂ ವಿವೇಕ ಶಾಲಾ ಕೊಠಡಿಗಳನ್ನು ನಿರ್ಮಿಸುತ್ತೇವೆ. ಮುಂದಿನ ತಿಂಗಳು 15 ಸಾವಿರ ಶಿಕ್ಷಕರಿಗೆ ನೇಮಕಾತಿ ಪತ್ರ ವಿತರಿಸಲಾಗುವುದು. ಕಲ್ಯಾಣ ಕರ್ನಾಟಕ ಭಾಗದಲ್ಲಿ 5 ಸಾವಿರ ಶಿಕ್ಷಕರನ್ನು ನೇಮಿಸಲಾಗುವುದು ಎಂದು ಹೇಳಿದ್ರು.
ಮಕ್ಕಳಿಗೆ ಧ್ಯಾನ ಏಕೆ? ಯೋಗ ಏಕೆ ಎಂದೆಲ್ಲಾ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ. ಆದರೆ ಅವರ ಕೈಲಿ ಅಧಿಕಾರವಿದ್ದಾಗ ಅವರು ಕೇವಲ 4,000 ಕೊಠಡಿಗಳನ್ನು ನಿರ್ಮಿಸಿದ್ದರು. ಆದರೆ ಈಗ ನಾವು ಇದರ ದುಪ್ಪಟ್ಟು ಸಂಖ್ಯೆಯ ಕೊಠಡಿಗಳನ್ನು ನಿರ್ಮಿಸುತ್ತಿದ್ದೇವೆ. ವಿವೇಕ ಯೋಜನೆಯಡಿ ನಿರ್ಮಿಸುವ ಕೊಠಡಿಗಳಿಗೆ ಹೋದ ಮೇಲೆ ವಿದ್ಯಾರ್ಥಿಗಳ ಮಾನಸಿಕ ಸ್ಥಿತಿ ಬಲಿಷ್ಠವಾಗಬೇಕು. ವಿವೇಕ ಎಂದರೆ ಮಕ್ಕಳ ಜ್ಞಾನ ಹೆಚ್ಚಾಗಬೇಕು, ಅವರಿಗೆ ವಿವೇಕಾನಂದರ ವಿಚಾರಗಳ ಪರಿಚಯವಾಗಬೇಕು. ಹೀಗಾಗಿ ವಿವೇಕ ಅಂತ ಹೆಸರು ಇಡಲಾಗಿದೆ. ರಾಜ್ಯದ ಎಲ್ಲಾ ತಾಲೂಕುಗಳಲ್ಲಿ ವಿವೇಕ ಶಾಲಾ ಕೊಠಡಿಗಳ ಶಂಕುಸ್ಥಾಪನೆ ನಡೆಯುತ್ತಿದೆ. ಕೊರೊನಾ ಕಾಲದಲ್ಲಿ ಯಾಕೆ ಶಾಲೆ ಪ್ರಾರಂಭಿಸ್ತೀರಿ ಅಂತ ಅನೇಕರು ಹೇಳಿದ್ದರು. ಆದರೆ ದೇಶದಲ್ಲಿ ಮೊದಲು ಶಾಲೆ ಆರಂಭಿಸಿದ್ದು ಕರ್ನಾಟಕ ಎಂದು ನೆನಪಿಸಿಕೊಂಡರು. ಇದನ್ನೂ ಓದಿ : – ನಂದಿನಿ ಹಾಲು, ಮೊಸರಿನ ದರ 3 ರೂ. ಏರಿಕೆ
ಕೇಸರಿ ಬಣ್ಣ ಹಚ್ಚಲು ನಾನು ಆದೇಶ ಮಾಡಿಲ್ಲ ಎಂದು ಸಚಿವ ಬಿ.ಸಿ.ನಾಗೇಶ್ ಇದೇ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು. ಕೊಠಡಿ ನಿರ್ಮಿಸುವ ಎಂಜಿನಿಯರ್ ಕೇಸರಿ ಬಣ್ಣ ಹಚ್ಚಿದರೆ ಹಚ್ಚಬಹುದು. ಅದರಿಂದ ತಪ್ಪೇನೂ ಇಲ್ಲ. ವಿರೋಧ ಪಕ್ಷಗಳು ಉದ್ದೇಶಪೂರ್ವಕವಾಗಿ ಪ್ರತಿಯೊಂದನ್ನೂ ವಿವಾದ ಮಾಡುತ್ತಿವೆ ಎಂದು ವಿಷಾದಿಸಿದರು.
ಇದನ್ನೂ ಓದಿ : – ಲಿವ್ ಇನ್ ಸಂಗಾತಿಯನ್ನು ಕೊಲೆಗೈದು 35 ತುಂಡು ಮಾಡಿ ಬಿಸಾಡಿದ ಪ್ರಿಯಕರ…!