ಮತದಾರರ (Voter id) ಮಾಹಿತಿ ಕಳವು ಪ್ರಕರಣದ ಹಿನ್ನೆಲೆಯಲ್ಲಿ ಇಂದು ಪಾಲಿಕೆ ಕೇಂದ್ರ ಕಚೇರಿಗೆ ಉಪ ಚುನಾವಣಾ ಆಯುಕ್ತರು ಭೇಟಿ ನೀಡಲಿದ್ದಾರೆ. ಈ ವೇಳೆ (ಡಿವೈ ಇಸಿ) ಸಹಕರಿಸುವಂತೆ ಹಾಗೂ ಎಲ್ಲ ಮಾಹಿತಿಯನ್ನು ಸಿದ್ಧವಾಗಿಟ್ಟುಕೊಳ್ಳುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಅಧಿಕಾರಿಗಳಿಗೆ ಮುಖ್ಯ ಚುನಾವಣಾ ಆಯೋಗ ಬುಧವಾರ ಸೂಚಿಸಿದೆ.
ಮತದಾರರ ದತ್ತಾಂಶ ಕಳ್ಳತನ ಪ್ರಕರಣ, ಎನ್ಜಿಒ (NGO) ಸೋಗು ಮತ್ತು ಕರಡು ಮತದಾರರ ಪಟ್ಟಿಯ ಪರಿಷ್ಕರಣೆ ಕುರಿತು ವಿವರಗಳನ್ನು ಪಡೆಯಲು ಡಿವೈಸಿಇಸಿ ನಗರಕ್ಕೆ ಭೇಟಿ ನೀಡುತ್ತಿದ್ದಾರೆ ಎಂದು ಬಿಬಿಎಂಪಿ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 2023ರ ಏಪ್ರಿಲ್ನಲ್ಲಿ ಚುನಾವಣೆ (Election) ನಡೆಯುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ರಾಜ್ಯ ಚುನಾವಣಾ ಆಯೋಗ ಮತ್ತು ಬಿಬಿಎಂಪಿ ಕರಡು ಮತದಾರರ ಪಟ್ಟಿ ಪರಿಷ್ಕರಣೆ ಮತ್ತು ಕಂದಾಯ ಅಧಿಕಾರಿಗಳು, ಬೂತ್ ಮಟ್ಟದ ಅಧಿಕಾರಿಗಳು ಮತ್ತು ಮತದಾರರ ಎಣಿಕೆಗಾಗಿ ಬೂತ್ ಮಟ್ಟದ ಸಮಿತಿಯಿಂದ ಮನೆ-ಮನೆ ಸಮೀಕ್ಷೆಗೆ ಸಿದ್ಧತೆಗಳನ್ನು ಪರಿಶೀಲಿಸಲು ಭೇಟಿ ನೀಡುತ್ತಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ : – ಭವಿಷ್ಯದ “ಅಂಬಾರಿ ಆನೆ” ಗೋಪಾಲಸ್ವಾಮಿ ಇನ್ನಿಲ್ಲ