ಕೋರ್ಟ್ ನಲ್ಲಿ ಕೇಸ್ ಹಾಕಲಿ ಇಲ್ಲವೇ ಜೈಲಿಗಾದ್ರೂ ಹಾಕಲಿ – ನಾವು ಎದುರಿಸಲು ಸಿದ್ಧ ಎಂದ ಡಿ.ಕೆ.ಸುರೇಶ್

ಬಿಜೆಪಿ (bjp ) ಸರ್ಕಾರದ ಒಳಸಂಚು, ಷಡ್ಯಂತ್ರವನ್ನು ಡಿ.ಕೆ. ಶಿವಕುಮಾರ್ ( dk . shivkumar )ಹಾಗೂ ಕಾಂಗ್ರೆಸ್ ( congress )ನವರು ಸಮರ್ಥವಾಗಿ ಎದುರಿಸಲಿದ್ದಾರೆ. ನಾವು ಎಲ್ಲದ್ದಕ್ಕೂ ಸಿದ್ಧವಾಗಿದ್ದೇವೆ’ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಸಂಸದ ಡಿ.ಕೆ. ಸುರೇಶ್ ( d.k.surersh )ತಿಳಿಸಿದ್ದಾರೆ.

ಜಾರಿ ನಿರ್ದೇಶನಾಲಯ ಡಿ.ಕೆ. ಶಿವಕುಮಾರ್ ವಿರುದ್ಧದ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ ವಿಚಾರವಾಗಿ ಮಾತನಾಡಿದ ಅವರು ನಾವು ಯಾವುದೇ ಕಾರಣಕ್ಕೂ ಹೆದರುವುದಿಲ್ಲ, ಶರಣಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ಸುದೀರ್ಘವಾಗಿ ತನಿಖೆ ನಡೆಯುತ್ತಲೇ ಇದೆ. ಇನ್ನೂ ನಡೆಯಲಿ. ಅದನ್ನು ಎದುರಿಸಲು ನಾವು ಮಾನಸಿಕವಾಗಿ, ದೈಹಿಕವಾಗಿ ಸಮರ್ಥವಾಗಿದ್ದೇವೆ ಎಂದರು.ಮೋದಿ ( MODI ) ಪ್ರಧಾನಿಯಾಗಿ ಕಳೆದ ಎಂಟು ವರ್ಷಗಳಲ್ಲಿ, ವಿರೋಧ ಪಕ್ಷಗಳ ಬಗ್ಗೆ ಯಾವ ರೀತಿ ನಡೆದುಕೊಂಡಿದ್ದಾರೆ. ಇದನ್ನೂ ಓದಿ :- ಸ್ಥಳದಲ್ಲಿ ದೇವರು ಇರುವುದು ನಿಜ – ಕೇರಳದ ದೈವಜ್ಞರಿಂದ ಉತ್ತರ

ತಮ್ಮ ವಿರೋಧಿಗಳು, ಸರ್ಕಾರದ ವಿರುದ್ಧ ಧ್ವನಿ ಎತ್ತುತ್ತಿರುವವರನ್ನು ಯಾವ ರೀತಿ ಹತ್ತಿಕ್ಕಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ. ಇದು ಕೂಡ ಅದರ ಭಾಗ. ಆರೋಪಪಟ್ಟಿಯಲ್ಲಿ ಏನಿದೆ ಎಂದು ನನಗೆ ಗೊತ್ತಿಲ್ಲ. ಈ ಪ್ರಕರಣದಲ್ಲಿ ರಾಜಕೀಯ ಬಿಟ್ಟು ಬೇರೇನೂ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.ಡಿ.ಕೆ. ಶಿವಕುಮಾರ್ ಕಾಂಗ್ರೆಸ್ ಪಕ್ಷದ ಸೈನಿಕನಾಗಿ, ಕಾರ್ಯಕರ್ತನಾಗಿ ಹೋರಾಟ ಮಾಡುತ್ತಿದ್ದಾರೆ. ಸರ್ಕಾರದವರು (government ) ಕೇಸ್ ಆದರೂ ಹಾಕಲಿ, ಜೈಲಿಗಾದರೂ ಹಾಕಲಿ, ನಾವು ಯಾವುದೇ ತಪ್ಪು ಮಾಡಿಲ್ಲ. ಕಾನೂನು ಹಾಗೂ ನ್ಯಾಯಾಲಯದ ಚೌಕಟ್ಟಿನಲ್ಲಿ ಕೋರ್ಟ್ ಆದೇಶಕ್ಕೆ ತಲೆಬಾಗುತ್ತೇವೆ’ ಎಂದು ತಿಳಿಸಿದ್ದಾರೆ. ಇದನ್ನೂ ಓದಿ :- ದೇವೇಗೌಡರನ್ನು ಭೇಟಿಯಾದ ತೆಲಂಗಾಣ ಸಿಎಂ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!