ಮಕ್ಕಳಿಗೆ ಕೋವಿಡ್ ಬಂದ ತಕ್ಷಣ ಏನು ಆಗೋದಿಲ್ಲ – ಡಾ. ಕೆ ಸುಧಾಕರ್

ಇಷ್ಟು ದಿನ ಕಡಿಮೆಯಾಗಿದ್ದ ಕೊರೊನಾ ಪ್ರಕರಣಗಳು ಇದೀಗ ರಾಜ್ಯದಲ್ಲಿ ಹೆಚ್ಚಾಗುತ್ತಿದೆ. ಸಿಲಿಕಾನ್ ಸಿಟಿ ಬೆಂಗಳೂರಿನ ಎರಡು ಖಾಸಗಿ ಶಾಲೆಗಳಲ್ಲಿ ಕೊರೋನಾ ಸ್ಫೋಟಗೊಂಡಿದೆ. ದಾಸರಹಳ್ಳಿ ವಲಯದ ರಾಜ ಗೋಪಾಲನಗರದಲ್ಲಿ ಇರುವ ನ್ಯೂ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ಮತ್ತು ಎಂಇಎಸ್ ಪಬ್ಲಿಕ್ ಸ್ಕೂಲ್ ಎಂಬ ಎರಡು ಖಾಸಗಿ ಶಾಲೆಗಳಲ್ಲಿ ಕೊರೊನಾ ಪ್ರಕರಣಗಳು ಪತ್ತೆಯಾಗಿದೆ.

ನ್ಯೂ ಇಂಟರ್ ನ್ಯಾಷನಲ್ ಸ್ಕೂಲ್ನಲ್ಲಿ 5 ಮತ್ತು 6 ನೇ ತರಗತಿಯಲ್ಲಿ ಓದುತ್ತಿದ್ದ 21 ಮಕ್ಕಳಿಗೆ ಕೊರೋನಾ ಪಾಸಿಟಿವ್ ಬಂದಿದ್ದು, ಎಂಇಎಸ್ ಪಬ್ಲಿಕ್ ಸ್ಕೂಲ್ನಲ್ಲಿ 5 ನೇ ತರಗತಿಯಲ್ಲಿ ಓದುತ್ತಿದ್ದ 10 ಮಕ್ಕಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸದ್ಯಕ್ಕೆ ಎಲ್ಲಾ ಮಕ್ಕಳಿಗೂ ಮತ್ತು ಶಾಲಾ ಸಿಬ್ಬಂದಿಗೂ ಕೋವಿಡ್ ಟೆಸ್ಟ್ ಮಾಡಲಾಗಿದೆ. ಸದ್ಯ ಶಾಲೆಗಳನ್ನು ಕಂಟೈನ್ಮೆಂಟ್ ಅಂತ ಘೋಷಣೆ ಮಾಡಲಾಗಿದ್ದು, ಕೊರೊನಾ ಪಾಸಿಟಿವ್ ಬಂದಿರುವ ಮಕ್ಕಳೆಲ್ಲರೂ ಕೂಡ ಕ್ಷೇಮವಾಗಿದ್ದು, ಯಾವುದೇ ಆತಂಕ ಪಡುವಂತ ಅಗತ್ಯವಿಲ್ಲ ಎನ್ನಲಾಗುತ್ತಿದೆ. ಇದನ್ನು ಓದಿ :- ಡ್ರಗ್ಸ್ ಕೇಸ್ – ಕಪೂರ್ ಗೆ ಸ್ಟೇಷನ್ ಬೇಲ್

ಇನ್ನೂ ಆ ಬಗ್ಗೆ ಮಾಹಿತಿ ಬಂದಿಲ್ಲ,ಮಾಹಿತಿ ಕ್ರೋಡಿಕರಿಸಿಕೊಳ್ಳುತ್ತೇನೆ- ಡಾ.ಸುಧಾಕರ್
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಮಕ್ಕಳಿಗೆ ಕೋವಿಡ್ ಬಂದ ತಕ್ಷಣ ಏನು ಆಗೋದಿಲ್ಲ. ಕಳೆದ ಎರಡ್ಮೂರು ತಿಂಗಳಿಂದ ಗಮನಿಸುತ್ತಿದ್ದೇವೆ. 12 ವರ್ಷ,15 ವರ್ಷ ಮೇಲ್ಪಟ್ಟವರಿಗೆ ವ್ಯಾಕ್ಸಿನೇಷನ್ ಆಗಿದೆಯಾ ಅನ್ನೋದನ್ನ ಪರಿಶೀಲನೆ ಮಾಡ್ತೀವಿ. ಕೋವಿಡ್ ಕಾಣಿಸಿಕೊಂಡ ಮಕ್ಕಳನ್ನು ಕ್ಲಾಸ್ ನಿಂದ ಸಸ್ಪೆಂಡ್ ಮಾಡ್ತೀವಿ. ಯಾರು ಆತಂಕಕ್ಕೆ ಒಳಗಾಗಬಾರದು. ಇದೆಲ್ಲವೂ ಒಮಿಕ್ರಾನ್ ಪ್ರಭೇದವೇ ಆಗಿದೆ. ನಮ್ಮಲ್ಲಿ BA4 ತರಹದ ತಳಿ ಪತ್ತೆ ಆಗಿಲ್ಲ. ಪೋಷಕರಲ್ಲಿ ಆತಂಕ ಸೃಷ್ಟಿಯಾಗೋದು ಸಹಜ. ಆದರೆ ಯಾರು ಆತಂಕಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ರು.

ಇದನ್ನು ಓದಿ :-   ನಟ ಸಿದ್ದಾಂತ್ ಕಪೂರ್ ಡ್ರಗ್ಸ್ ತೆಗೆದುಕೊಂಡಿರೋದು ಸಾಬೀತು – ಡಿಸಿಪಿ ಭೀಮಾಶಂಕರ್ ಗುಳೇದ್ ಸ್ಪಷ್ಟನೆ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!