ವಿಪಕ್ಷಗಳು ಹೇಳಿದ್ದು ಯಾವುದು ನಿಜವಾಗಿದೆ – ಸಿಎಂ ಬೊಮ್ಮಾಯಿ ಪ್ರಶ್ನೆ

ಗುಜರಾತ್ (Gujrath) ನಲ್ಲಿ ಬಿಜೆಪಿ ಸ್ಪಷ್ಟವಾಗಿ ಬಹುಮತ ಪಡೆದುಕೊಂಡಿದೆ. ಈ ಬಾರಿ ಗುಜರಾತ್ ನಲ್ಲಿ ಬಿಜೆಪಿ (BJP) ಅಭೂತಪೂರ್ವ ಗೆಲುವು ಸಾಧಿಸಿದೆ ಎಂದು ಬೆಂಗಳೂರಿನಲ್ಲಿ ಸಿಎಂ ಬೊಮ್ಮಾಯಿ (Bommai) ಹೇಳಿದ್ದಾರೆ. ಗುಜರಾತ್ ನಲ್ಲಿ ಬಿಜೆಪಿ ಕಳೆದ ಬಾರಿಗಿಂತ ಅತಿ ಹೆಚ್ಚು ಸ್ಥಾನ ಪಡೆದುಕೊಂಡಿದೆ.

ಗುಜರಾತ್ (Gujrath) ನಲ್ಲಿ ಬಿಜೆಪಿ ಸ್ಪಷ್ಟವಾಗಿ ಬಹುಮತ ಪಡೆದುಕೊಂಡಿದೆ. ಈ ಬಾರಿ ಗುಜರಾತ್ ನಲ್ಲಿ ಬಿಜೆಪಿ (BJP) ಅಭೂತಪೂರ್ವ ಗೆಲುವು ಸಾಧಿಸಿದೆ ಎಂದು ಬೆಂಗಳೂರಿನಲ್ಲಿ ಸಿಎಂ ಬೊಮ್ಮಾಯಿ (Bommai) ಹೇಳಿದ್ದಾರೆ. ಗುಜರಾತ್ ನಲ್ಲಿ ಬಿಜೆಪಿ ಕಳೆದ ಬಾರಿಗಿಂತ ಅತಿ ಹೆಚ್ಚು ಸ್ಥಾನ ಪಡೆದುಕೊಂಡಿದೆ.

ಎಕ್ಸಿಟ್ ಪೋಲ್ ಗಳು ಇದೇ ಹೇಳಿತ್ತು. ಗುಜರಾತ್ ನಲ್ಲಿ 7 ನೇ ಬಾರಿ ಗೆಲ್ಲುತ್ತಿದ್ದೇವೆ ಅದು ಸುಲಭದ ಮಾತಲ್ಲ. ಚೆನ್ನಾಗಿ ಆಡಳಿತ ಮಾಡಿದಕ್ಕೆ ಗುಜರಾತ್ ನಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದಿದೆ. ಇದಕ್ಕೆ ಅಡಿಪಾಯ ಹಾಕಿದ್ದು ನಮ್ಮ ನೆಚ್ಚಿನ ನಾಯಕ ನರೇಂದ್ರ ಮೋದಿಯವರು. ಹಳೇ ಮತ್ತು ಹೊಸ ಪೀಳಿಗೆಯ ಜನರು ಮೋದಿಯವರ ಆಡಳಿತವನ್ನ ಒಪ್ಪಿಕೊಂಡಿದ್ದಾರೆ. ದೇಶ ಮುನ್ನಡೆಸುವ ಅವರ ನಾಯಕತ್ವವನ್ನ ಒಪ್ಪಿಕೊಂಡಿದ್ದಾರೆ. ಗುಜರಾತ್, ಗೋವಾ (Goa) ಸೇರಿದಂತೆ ಹಲವು ಕಡೆ ಬಿಜೆಪಿ ಗೆಲುವು ಕಂಡಿದೆ ಎಂದು ಹೇಳಿದ್ರು.
ದೆಹಲಿಯ ಮುನ್ಸಿಪಲ್ ಚುನಾವಣೆಯಲ್ಲಿ ಹಿನ್ನಡೆ ವಿಚಾರ..
ದೆಹಲಿ (Delhi) ಯಲ್ಲಿ ಲೋಕಲ್ ಬಾಡಿಯಲ್ಲಿ 15 ವರ್ಷ ಆಡಳಿತ ಮಾಡೋದೇ ದೊಡ್ಡ ಸಾಧನೆ ಮುನ್ಸಿಪಲ್ ಎಲೆಕ್ಷನ್ ಜನರಲ್ ಎಲೆಕ್ಷನ್ ಗೆ ಹೋಲಿಕೆ ಮಾಡಲು ಆಗೋದಿಲ್ಲ . ಗುಜರಾತ್ ಚುನಾವಣೆಯ ಫಲಿತಾಂಶ ರಾಜ್ಯದ ಚುನಾವಣಾ ಮೇಲೆ ಪರಿಣಾಮ ಬೀರಲಿದೆ. ಇದನ್ನು ಓದಿ : –   Gujarat Election Results- ಗುಜರಾತ್ ನಲ್ಲಿ ಇತಿಹಾಸ ಸೃಷ್ಟಿಸಿದ ಬಿಜೆಪಿ, ಕಾಂಗ್ರೆಸ್ ದಾಖಲೆ ಪುಡಿಪುಡಿ

ಬಿಜೆಪಿ ಕಾರ್ಯಕರ್ತರಿಗೆ ಮತ್ತು ಬೆಂಬಲಿಗರಿಗೆ ಬಹಳ ದೊಡ್ಡ ಬೆಂಬಲ ಬರುತ್ತೆ ಎಂದು ತಿಳಿಸಿದ್ರು. ಗುಜರಾತ್ ಚುನಾವಣೆ ರಾಜ್ಯದ ಮೇಲೆ ಪರಿಣಾಮ ಬೀರಲ್ಲ ಅನ್ನೋ ಕಾಂಗ್ರೆಸ್ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಅವರು ಹಂಗೆ ಹೇಳಬೇಕು ಅಲ್ವಾ…ಬೇರೆ ರೀತಿ ಹೇಳಲು ಹೆಂಗ್ ಸಾಧ್ಯ..? ವಿಪಕ್ಷಗಳು ಹೇಳಿದ್ದು ಯಾವುದು ನಿಜವಾಗಿದೆ..ಅವರು ಹೇಳಿದ್ದು ಯಾವುದು ನಿಜವಾಗಿಲ್ಲ.. ಅವರ ಹೇಳಿಕೆಗೆಲ್ಲ ತಲೆಕೆಡಿಸಿಕೊಳ್ಳಬೇಡಿ ಎಂದು ಸಿಎಂ ಕಾಂಗ್ರೆಸ್ ವಿರುದ್ದ ವ್ಯಂಗ್ಯವಾಡಿದ್ರು.

ಇದನ್ನು ಓದಿ : –  ಗುಜರಾತ್ ನಲ್ಲಿ ಆಪ್ ಗೆ ಬಿಜೆಪಿಯಿಂದಲೇ ಫಂಡಿಂಗ್- ..! ಸಿದ್ದರಾಮಯ್ಯ ಗಂಭೀರ ಆರೋಪ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!