ಬಿಜೆಪಿಯವರು ಯಾಕೆ ಮುಸ್ಲಿಮರ ಓಲೈಕೆ ಮಾಡಬೇಕು.? – ಪ್ರಮೋದ್ ಮುತಾಲಿಕ್

ಮಂಡ್ಯ- ನಾಳೆಯಿಂದ ದೇವಾಲಯಗಳಲ್ಲಿ ಸುಪ್ರಭಾತ ಪಠಣ ವಿಚಾರವಾಗಿ ಮಂಡ್ಯದಲ್ಲಿ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ (PRAMOD MUTALIK )ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯದ ಸಾವಿರ ದೇವಾಲಯಗಳ ಸಂಪರ್ಕ ಆಗಿದೆ. ದೇವಾಲಯದ ಅರ್ಚಕರು, ಟ್ರಸ್ಟ್ನವರು ಸಂತೋಷದಿಂದಲೇ ಒಪ್ಪಿದ್ದಾರೆ.

ಬೆಳಿಗ್ಗಿನ ಜಾವ ಭಕ್ತಿ ಗೀತೆ, ಹನುಮಾನ್ ಚಾಲೀಸಾ ಹಾಕಲು ಒಪ್ಪಿಗೆ ನೀಡಿದ್ದಾರೆ. ಎಲ್ಲರಲ್ಲೂ ಸಂತೋಷ ಇದೆ, ಆಕ್ರೋಶವೂ ಇದೆ.ಸರ್ಕಾರ ಯಾವ ಕ್ರಮವನ್ನು ತೆಗೆದುಕೊಳ್ತಿಲ್ಲ. ಮುಸ್ಲಿಂ ರ ಉದ್ಧಟತನ ಹೆಚ್ಚಾಗಿದೆ. ಸರ್ಕಾರ ಅಭಿಯಾನ ಹತ್ತಿಕ್ಕುವ ಪ್ರಯತ್ನ ಮಾಡ್ತಿದೆ. ನಾವು ಸಂಪರ್ಕಿಸಿದ ದೇವಾಲಯಕ್ಕೆ ಹೋಗಿ ಹೆದರಿಸುತ್ತಿದ್ದಾರೆ. ಈ ದಾದ ಗಿರಿ ನಡೆಯಲ್ಲ, ಮುಸ್ಲಿಮರ ಮೈಕಿಗೆ ನಿಮ್ಮ ದಾದಾಗಿರಿ ತೋರಿಸಿ. ನಮ್ಮ ಓಟಿನಿಂದಲೇ ನೀವು ಗೆದ್ದಿರುವುದು ಎಂದು ಬಿಜೆಪಿ ಸರ್ಕಾರಕ್ಕೆ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಪೊಲೀಸರಿಂದ ದೇವಾಲಯಗಳನ್ನು ಹೆದರಿಸುವ ಕೆಲಸ ಸರಿಯಲ್ಲ. ಯಾವುದೇ ಗದ್ದಲವಿಲ್ಲದೆ ಶಾಂತ ರೀತಿಯಲ್ಲಿ ಅಭಿಯಾನ ಮಾಡುತ್ತೇವೆ. ಇದನ್ನೂ ಓದಿ : – ಕಾಂಗ್ರೆಸ್ ನವರಿಗೆ ಪಕ್ಷ ಕಟ್ಟಲು ಗೊತ್ತಿಲ್ಲ..ಇನ್ನು ನಾಡನ್ನು ಏನ್ ಕಟ್ತಾರೆ? – ನಳೀನ್ ಕುಮಾರ್ ಕಟೀಲ್

ಗಲಭೆ ಅಶಾಂತಿ ಮಸೀದಿ ಮೈಕ್ ಮೂಲಕ ಆಗುತ್ತಿದೆ. ಹಿಂದೂಗಳಿಂದ ಗೆದ್ದ ಯೋಗಿ ಸರ್ಕಾರ 60 ಸಾವಿರ ಮೈಕ್ ತೆರವುಗೊಳಿಸಿದೆ. ನಮ್ಮ ರಾಜ್ಯದಲ್ಲಿ ಯಾಕೆ ಆ ಕೆಲಸ ಆಗುತ್ತಿಲ್ಲ. ಯೋಗಿ ರೀತಿ ಗಡ್ಸ್ ಬೊಮ್ಮಾಯಿ, ಆರಗ ಯಾಕೆ ತೋರಿಸುತ್ತಿಲ್ಲ. ಸುಪ್ರೀಂ ಆದೇಶ ಎಲ್ಲರಿಗೂ ಒಂದೇ. ನೀವು ಹೊಸ ನಿಯಮ ಮಾಡಬೇಕಿಲ್ಲ, ನಿಮ್ಮ ತಾಕತ್ತು ತೋರಿಸಿ. ಈ ಸರ್ಕಾರಕ್ಕೆ ಗಡ್ಸ್ ತಾಕತ್ತು ಇಲ್ಲ. ಸರ್ಕಾರ ಆದೇಶ ಪಾಲಿಸದ ಇರೋದ್ರಿಂದ ನಮ್ಮ ಹೋರಾಟ. ಬುರ್ಕಾ ಹಾಕೊಂಡು ಓಡಾಡಿದ್ರು ಬಿಜೆಪಿಗೆ ಒಂದು ಮುಸ್ಲಿಂ ಓಟು ಬರಲ್ಲ. ಯಾಕೆ ಇವರು ಮುಸ್ಲಿಮರ ಓಲೈಕೆ ಮಾಡಬೇಕು.? ಬೇರೇನು ಇಲ್ಲ ಇವರು ಮುಸ್ಲಿಮರಿಗೆ ಹೆದರುತ್ತಿದ್ದಾರೆ. ನಿಮಗೆ ಆಗದಿದ್ರೆ ಹೇಳಿ ನಾವು ಮೈಕ್ ಬಂದ್ ಮಾಡುತ್ತೇವೆ ಎಂದು ಬಿಜೆಪಿ ಸರಕಾರದ ವಿರುದ್ದ ಕಿಡಿಕಾರಿದ್ರು.

ಇದನ್ನೂ ಓದಿ : – ನಾನು ಒಳ್ಳೆಯದನ್ನೂ ಮಾಡಿದ್ದೀನಿ, ಅದನ್ನೂ ತೋರಿಸಿ – ಕ್ಯಾಮೆರಾ ಮುಂದೆ ಕೈ ಮುಗಿದ ಆರ್.ಡಿ.ಪಾಟೀಲ್

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!