ಬಿಜೆಪಿಗೆ ಏತಕ್ಕಾಗಿ ಮತ ಹಾಕಬೇಕು? – ಸಲೀಂ ಅಹ್ಮದ್ ಪ್ರಶ್ನೆ

ಕಾಂಗ್ರೆಸ್ ನ (CONGRESS ) ಬಸವರಾಜ ಗುರಿಕಾರ (basavaraj gurikar ) ಗೆಲುವು ಸಾಧಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ಕಾಂಗ್ರೆಸ್ ಮುಖಂಡ ಸಲೀಂ ಅಹ್ಮದ್ (Salim ahamed ) ತಿಳಿಸಿದ್ದಾರೆ. ಗುರಿಕಾರ ಕಳೆದ 40 ವರ್ಷಗಳ ಕಾಲ ಈ ಕ್ಷೇತ್ರದಲ್ಲಿ ಪ್ರಾಮಾಣಿಕ ಕೆಲಸ ಮಾಡಿದ್ದಾರೆ.

ಶಿಕ್ಷಕರು ಬಿಜೆಪಿಯಿಂದ (BJP ) ಭ್ರಮನಿರಸರಾಗಿದ್ದಾರೆ. ಯಾತಕ್ಕಾಗಿ ಬಿಜೆಪಿಗೆ ಮತ ಹಾಕಬೇಕು. ಬೆಲೆ ಏರಿಕೆಗೆ, ಭ್ರಷ್ಟಾಚಾರಕ್ಕಾಗಿ ಮತ ಹಾಕಬೇಕಾ ಎಂದು ಸಲೀಂ ಪ್ರಶ್ನಿಸಿದ್ದಾರೆ. ಈಗಾಗಲೇ ನಿರಂತರವಾಗಿ 2 ವರ್ಷಗಳಿಂದ ಶಿಕ್ಷಕರ ಮೇಲೆ ಅನ್ಯಾಯವಾಗುತ್ತಿದೆ. ಇದಕ್ಕೆ ಸರ್ಕಾರ (Government ) ಉತ್ತರ ಕೊಡಬೇಕು. ತಲೆ ತಗ್ಗಿಸುವಂತೆ ಕೆಲಸ ಈ ಸರ್ಕಾರದಿಂದ ನಡೆಯುತ್ತಿದೆ. ಭ್ರಷ್ಟಾಚಾರ ತಾಂಡವವಾಡುತ್ತಿದೆ. ಶಿಕ್ಷಕರ ನೇಮಕಾತಿ, ಪೊಲೀಸ್ ನೇಮಕಾತಿಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ. ಇದರಿಂದ ಶಿಕ್ಷಕರು (teachers ) ಅರ್ಥ ಮಾಡಿಕೊಳ್ಳುತ್ತಾರೆ. ಸೋಲಿನ ಭಯದಿಂದ ಹೆದರಿ ಹೊರಟ್ಟಿ ( basavaraj horatti )ಬಿಜೆಪಿಗೆ ಸೇರಿದ್ದಾರೆ ಎಂಬ ಸಂದೇಶ ಶಿಕ್ಷಕರಿಗೆ ಹೋಗಿದೆ.

ಏಳು ಬಾರಿ ಸೆಕ್ಯುಲರ್ ಪಾರ್ಟಿಯಿಂದ ಸ್ಪರ್ಧೆ ಮಾಡಿದ್ದರಿಂದ ಜ್ಯಾತ್ಯಾತೀತ ಮತಗಳು ಅವರಿಗೆ ಹೋಗುತ್ತಿದ್ದವು. ಆದರೆ ಇವತ್ತು ಅಧಿಕಾರದ ಆಸೆಯಿಂದೆ ಚೇರ್ಮೆನ್ ಆಗಬೇಕು ಎಂಬ ಆಸೆಯಿಂದ ಅವರು ಬಿಜೆಪಿ ಸೇರಿದ್ದಾರೆ . ಶಿಕ್ಷಕರು ಅರ್ಥ ಮಾಡಿಕೊಳ್ಳುತ್ತಾರೆ. ಗುರಿಕಾರ ಮೇಲೆ ಯಾವುದೇ ಕಳಂಕ ಇಲ್ಲ. ಶಿಕ್ಷಕರು ಬದಲಾವಣೆ ಬಯಸುತ್ತಿದ್ದಾರೆ. ಗುರಿಕಾರ ಈ ಬಾರಿ ಗೆಲ್ಲುತ್ತಾರೆ ಎಂದು ಸಲೀಂ ಅಹ್ಮದ್ ತಿಳಿಸಿದ್ರು . ಇದನ್ನೂ ಓದಿ : – ಪಕ್ಷದ ನಿರ್ಣಯಕ್ಕೆ ನಾವೆಲ್ಲರು ತಲೆಬಾಗಲೇಬೇಕು – ಆರಗ ಜ್ಞಾನೇಂದ್ರ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!