ಚಿಕ್ಕಮಗಳೂರಿ (Chikkamagaluru) ನ ಚಂದ್ರದ್ರೋಣ ಪರ್ವತ (Chandradrona mountain) ಸಾಲಿನ ಕೆಲ ಪ್ರವಾಸಿ ಸ್ಥಳಗಳನ್ನು ನಿರ್ಬಂಧಿಸಲಾಗಿದೆ. ಜಿಲ್ಲಾಡಳಿತ 1200 ಕೆಜಿ ಮೇಲ್ಪಟ್ಟ ವಾಹನಗಳನ್ನು ನಿಷೇಧಿಸಿದೆ.
ಬೆಳಗ್ಗೆ 6 ರಿಂದ 9 ಹಾಗೂ ಸಂಜೆ 2 ರಿಂದ 4 ಗಂಟೆವರೆಗೆ ಮಾತ್ರ ವಾಹನಗಳಿಗೆ ಅವಕಾಶ ನೀಡಲಾಗಿದೆ. ತಲಾ 150 ವಾಹನಗಳಂತೆ ದಿನಕ್ಕೆ 300 ವಾಹನಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಅಧಿಕೃತ ಹೊಂ ಸ್ಟೇ, ರೆಸಾರ್ಟ್ ಬುಕ್ಕಿಂಗ್ ಮಾಡಿದವರಿಗೆ ಮಾತ್ರ ಅವಕಾಶ ನೀಡಲಾಗಿದೆ. ಮುಳ್ಳಯ್ಯನಗಿರಿ (Mulayanagiri), ದತ್ತಪೀಠ (Datta peeta) , ಝರಿ ಪಾಲ್ಸ್ ಮಾಣಿಕ್ಯಧಾರ (Manikya dara) ಪ್ರವಾಸಿ ಸ್ಥಳಗಳಿಗೆ ಅವಕಾಶವಿದೆ. ಗಿರಿಸಾಲಿನಲ್ಲಿ ಭಾರೀ ಮಳೆಗೆ ಗುಡ್ಡ ಕುಸಿತ ಹಿನ್ನೆಲೆಯಲ್ಲಿ, ಗಿರಿ ಭಾಗದ ಸ್ಥಳೀಯರಿಗೆ ಯಾವುದೇ ನಿರ್ಬಂಧವಿಲ್ಲ ಎಂದು ಜಿಲ್ಲಾಡಳಿತ ಆದೇಶಿಸಿದೆ. ಇದನ್ನೂ ಓದಿ : – ತುಂಗಾಭದ್ರ ಗ್ರಾಮದಲ್ಲಿ ಜಿಟಿಜಿಟಿ ಮಳೆಗೆ ಮನೆ ಕುಸಿತ, ಇಬ್ಬರಿಗೆ ಗಂಭೀರ ಗಾಯ
ಈ ನಡುವೆ ಮಹಾಮಳೆಗೆ ಎರಡನೇ ಬಲಿಯಾಗಿರುವ ಘಟನೆ ಚಿಕ್ಕಮಗಳೂರಿನ ಕಳಸ ತಾಲೂಕಿನ ಹೊರನಾಡು ಸಮೀಪದ ಕಾಫಿ ತೋಟದಲ್ಲಿ ನಡೆದಿದೆ. ಪ್ರಿಯಾಂಕ (20) ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಪ್ರಿಯಾಂಕ (Priyanka)ಮೂಲ ಹರಪನಹಳ್ಳಿ ತಾಲೂಕಿನವಳು ಎನ್ನಲಾಗಿದೆ. ಕೆಲಸ ಮಾಡುವಾಗ ಮರ ಬಿದ್ದು ಸಾವನ್ನಪ್ಪಿದ್ದಾಳೆ. ಕಳಸ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಇದನ್ನೂ ಓದಿ : – ಚಿಕ್ಕಮಗಳೂರಿನಲ್ಲಿ ಮಳೆಯಿಂದಾಗಿ ಮನೆ ಕುಸಿತ