ದೇಶದಲ್ಲಿ ಕೋವಿಡ್-19 ಸಾಂಕ್ರಾಮಿಕದಿಂದ 4.7 ಮಿಲಿಯನ್ ಜನರು ಸಾವನ್ನಪ್ಪಿದ್ದಾರೆ ಎಂಬ ವಿಶ್ವ ಆರೋಗ್ಯ ಸಂಸ್ಥೆ ವರದಿ ಹಿನ್ನೆಲೆಯಲ್ಲಿ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ಈ ಸಂಬಂಧ ರಾಹುಲ್ ಟ್ವೀಟ್ ಮಾಡಿದ್ದು, ಕೋವಿಡ್ ಸಾಂಕ್ರಾಮಿಕದಿಂದ 47 ಲಕ್ಷ ಜನರು ಸಾವನ್ನಪ್ಪಿದ್ದಾರೆ. ಸರ್ಕಾರ ಹೇಳಿದಂತೆ 4.8 ಲಕ್ಷ ಜನರು ಸತ್ತಿಲ್ಲ. ವಿಜ್ಞಾನ ಸುಳ್ಳು ಹೇಳಲ್ಲ, ಮೋದಿ ಹೇಳುತ್ತಾರೆ ಎಂದಿದ್ದಾರೆ.ಇದನ್ನು ಓದಿ :- ನಾಳೆನೇ ನಿನ್ನ ಎತ್ತಂಗಡಿ ಮಾಡಿಸ್ತೇನೆ – ಇನ್ಸ್ ಪೆಕ್ಟರ್ ಗೆ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಆವಾಜ್
![The Corona Crisis: The Rothschilds? Bill Gates? The Search For A Scapegoat Has Begun](https://imageio.forbes.com/specials-images/imageserve/5e74f4b010380d0006bdbd41/Forbes-50/960x0.jpg?fit=bounds&format=jpg&width=960)
ಕೋವಿಡ್-19 ಸಾಂಕ್ರಾಮಿಕದಿಂದ ಮೃತಪಟ್ಟವರ ಕುಟುಂಬ ಸದಸ್ಯರಿಗೆ ನಾಲ್ಕು ಲಕ್ಷ ರೂಪಾಯಿ ಪರಿಹಾರವನ್ನು ಕಡ್ಡಾಯಪಡಿಸಬೇಕೆಂದು ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.
![PM Modi to chair debate at UNSC | India News,The Indian Express](https://images.indianexpress.com/2021/07/Modi-16.jpg)
ಕೋವಿಡ್-19 ಸಾಂಕ್ರಾಮಿಕದಿಂದ ಭಾರತದಲ್ಲಿ 4.7 ಮಿಲಿಯನ್ ಜನರು ಸಾವನ್ನಪ್ಪಿರುವುದಾಗಿ ವಿಶ್ವ ಆರೋಗ್ಯ ಸಂಸ್ಥೆ ಹೇಳಿತ್ತು. ಇದು ಸರ್ಕಾರ ಅಧಿಕೃತವಾಗಿ ಘೋಷಿಸಿದ್ದಕ್ಕಿಂತಲೂ ಬಹುತೇಕ 10 ಪಟ್ಟು ಹೆಚ್ಚಾಗಿದೆ.
ಇದನ್ನು ಓದಿ :- ಕೊಟ್ರೆ ಸನ್ಮಾನ ಮಾಡುತ್ತೇವೆ ಕೊಡದೇ ಇದ್ರೆ ಹೋರಾಟ ಮಾಡುತ್ತೇವೆ – ಬಸನಗೌಡ ಪಾಟೀಲ್ ಯತ್ನಾಳ್