ಅಣ್ಣಾಮಲೈ ಅವರಿಗೆ ಜೀವ ಬೆದರಿಕೆ ಕರೆ:ವೈ ಪ್ಲಸ್ ಭದ್ರತೆ ನೀಡಿದ ತಮಿಳುನಾಡು ಪೊಲೀಸರು

ಚೆನ್ನೈ: ಮಾಜಿ ಐಎಎಸ್ ಅಧಿಕಾರಿ ಅಣ್ಣಾಮಲೈ ಅವರಿಗೆ ಬೆದರಿಕೆ ಕರೆಗಳು ಬರುತ್ತಿವೆ. ಹೀಗಾಗಿ ಅವರಿಗೆ ಅಣ್ಣಾಮಲೈ ಅವರಿಗೆ ತಮಿಳುನಾಡು ಪೊಲೀಸರು ವೈ ಪ್ಲಸ್ ಭದ್ರತೆಯನ್ನು ಒದಗಿಸಿದ್ದಾರೆ. ತಮಿಳುನಾಡು ಬಿಜೆಪಿ ಘಟಕದ ಉಪಾಧ್ಯಕ್ಷರಾಗಿರುವ ಅವರು ಸದ್ಯ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪ್ರಚಾರ್ಯಕಾರ್ಯದಲ್ಲಿ ತೊಡಗಿದ್ದಾರೆ. ಅಣ್ಣಾಮಲೈ ಅವರಿಗೆ ವೈ ಪ್ಲಸ್ ಭದ್ರತೆ ನೀಡಿರುವ ಹಿನ್ನಲೆ ಅವರ ಭದ್ರತೆಗೆ 11 ಜನ ಕಮಾಂಡೋಗಳು ಮತ್ತು ಇಬ್ಬರು ಗನ್ ಮ್ಯಾನ್, ಅವರ ನಿವಾಸಕ್ಕೆ ಒಬ್ಬರು ಭದ್ರತೆಯನ್ನು ನಿಯೋಜಿಸಲಾಗಿದೆ.
ಕರ್ನಾಟಕದ ಸಿಂಗಂ ಎಂದೇ ಗುರುತಿಸಿ ಕೊಂಡಿದ್ದ ಐಪಿಎಸ್ ಅಧಿಕಾರಿಯಾಗಿದ್ದ ಅಣ್ಣಾಮಲೈ ನೇರ ದಿಟ್ಟ ಆಡಳಿತದಿಂದ ಜನ ಮನ್ನಣೆ ಪಡೆದಿದ್ದರು. 10 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿದ ಬಳಿಕ ಅವರು ಮೇ 2019ರಲ್ಲಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದರು. ಬಳಿಕ ಬಿಜೆಪಿ ಪಕ್ಷ ಸೇರಿದ ಅವರು ತಮಿಳುನಾಡಿನಲ್ಲಿ ಸಕ್ರಿಯ ರಾಜಕಾರಣಿಯಾಗಿ ಗುರಿತಿಸಿಕೊಳ್ಳುತ್ತಿದ್ದಾರೆ.