ಮೈಸೂರಿನ ರಾಜವಂಶಸ್ಥ ಯದುವೀರ್ ಒಡೆಯರ್ (YADUVEER WADIYAR ) ಇಂದು ಕುಟುಂಬ ಸಮೇತ ನಂಜನಗೂಡಿನ ನಂಜುಂಡೇಶ್ವರನ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಪತ್ನಿ ತ್ರಿಷಿಕಾ ಯದುವೀರ್( TRISHIKA YADUVEER ) ಹಾಗೂ ಪುತ್ರ ಆದ್ಯವೀರ್ ಜೊತೆ ಆಗಮಿಸಿ ನಂಜುಂಡನ ದರುಶನ ಪಡೆದರು. ರಾಜ್ಯದಲ್ಲಿ ಉತ್ತಮ ಮಳೆ ಆಗುತ್ತಿದ್ದು ಅನ್ನದಾತನಿಗೆ ಶುಭ ಕೋರಿ ಪೂಜೆ ಸಲ್ಲಿಸಿದರು. ಇದನ್ನೂ ಓದಿ :- ಶ್ರೀಲಂಕಾ ಆರ್ಥಿಕ ಬಿಕ್ಕಟ್ಟು – ರಾಜಪಕ್ಸೆ ಸಂಪುಟಕ್ಕೆ ಎಂಟು ಸಚಿವರು ಸೇರ್ಪಡೆ !
ದೇವಾಲಯದ ಸಿಬ್ಬಂದಿ ಮತ್ತು ಅಧಿಕಾರಿಗಳು ಮಹಾರಾಜ ಯದುವೀರ್ ಅವರಿಗೆ ಅದ್ಧೂರಿ ಗೌರವ ಸಲ್ಲಿಸಿದರು. ಸುಮಾರು ಅರ್ಧಗಂಟೆಗಳ ಕಾಲ ಗರ್ಭಗುಡಿ ಮುಂದೆ ಕುಳಿತ ಕುಟುಂಬ ರಾಜ್ಯದ ಒಳಿತಿಗಾಗಿ ಪ್ರಾರ್ಥನೆ ಸಲ್ಲಿಸಿದರು. ಸುಮಾರು 2 ಗಂಟೆಗಳಿಗೂ ಹೆಚ್ಚು ಕಾಲ ದೇವಾಲಯದ ಸುತ್ತ ಪ್ರದರ್ಶನ ಹಾಕಿ ನಾಡಿನ ಒಳಿತಿಗಾಗಿ ಪ್ರಾರ್ಥಿಸಿದ್ರು. ಇದನ್ನೂ ಓದಿ : – ಅರಬ್ ದೇಶಗಳಲ್ಲಿ ಭಾರತದ ಮೇಲೆ ಹಬ್ಬಿದ ವದಂತಿ ಏನು ಗೊತ್ತಾ…?