‘ಹೆಡ್ ಬುಷ್’ (Head Bush) ಚಿತ್ರದಲ್ಲಿ ಕರಗಕ್ಕೆ ಸಂಬಂಧಿಸಿದ ದೃಶ್ಯಗಳು ಆಕ್ಷೇಪಾರ್ಹವಾಗಿವೆ.ವೀರಗಾಸೆ (Veeragase) ಕಲಾವಿದರಿಗೆ ಅವಮಾನ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಅನೇಕ ಸಂಘಟನೆಗಳು ಚಿತ್ರತಂಡದ ವಿರುದ್ಧ ತಿರುಗಿ ಬಿದ್ದಿದ್ದವು. ಪೊಲೀಸ್ ಠಾಣೆಯಲ್ಲಿ ದೂರು ಕೂಡ ದಾಖಲಾಗುವ ಹಂತಕ್ಕೆ ವಿವಾದ ಹುಟ್ಟಿಕೊಂಡಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಸಭೆ ನಡೆಸಿ ಪರಿಹಾರ ಕಂಡುಕೊಳ್ಳಲಾಗಿದೆ.
ಕರಗದ (Karaga) ದೃಶ್ಯದಲ್ಲಿ ಬರುವ ಡೈಲಾಗ್ ಅನ್ನು ಮ್ಯೂಟ್ ಮಾಡಲು ಚಿತ್ರತಂಡ ತೀರ್ಮಾನಿಸಿದೆ.
ಬಳಿಕ ಮಾತನಾಡಿದ ಡಾಲಿ, ಡಾನ್ ಜಯರಾಜ್ ಜೀವನದ ಕಥೆಯನ್ನು ಆಧರಿಸಿ ‘ಹೆಡ್ ಬುಷ್’ ಸಿನಿಮಾ ಮೂಡಿಬಂದಿದೆ. ಅಕ್ಟೋಬರ್ 21ರಂದು ಈ ಚಿತ್ರ ಬಿಡುಗಡೆ ಆಗಿದೆ. ಜನರಿಂದ ಉತ್ತಮ ಪ್ರತಿಕ್ರಿಯೆ ಕೂಡ ಸಿಕ್ಕಿದೆ. ಅದರ ಜೊತೆಗೆ ವಿವಾದವೂ ಹುಟ್ಟಿಕೊಂಡಿದೆ.
ವೀರಗಾಸೆ ಕಲಾವಿದರ ಮೇಲೆ ಹಲ್ಲೆ ಮಾಡುವಂತಹ ದೃಶ್ಯಗಳು ಈ ಚಿತ್ರದಲ್ಲಿ ಇವೆ ಎಂಬ ಕಾರಣಕ್ಕೆ ಕೆಲವರು ಈ ಸಿನಿಮಾ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು. ‘ತಪ್ಪಾಗಿದ್ರೆ ನಾನು ಕ್ಷಮೆ ಕೇಳುತ್ತೇನೆ. ಚಿತ್ರದಲ್ಲಿ ಕರಗದ ಬಗ್ಗೆ ಇರುವ ಡೈಲಾಗ್ ನ್ನ ಮ್ಯೂಟ್ ಮಾಡುತ್ತೇವೆ. ವೀರಗಾಸೆ ಕಲಾವಿದರಿಗೂ ನೋವಾಗಿದ್ರೆ ಕ್ಷಮೆ ಇರಲಿ. ಇದನ್ನು ಇಲ್ಲಿಗೆ ನಿಲ್ಲಿಸೋಣ. ಮತ್ತೆ ಕೆಲಸ ಮಾಡೋಣ’ ಎಂದು ಡಾಲಿ ಧನಂಜಯ್ ಹೇಳಿದ್ದಾರೆ. ಆ ಮೂಲಕ ವಿವಾದಕ್ಕೆ ಫುಲ್ ಸ್ಟಾಪ್ ಹಾಕುವ ನಿರ್ಧಾರಕ್ಕೆ ಬರಲಾಗಿದೆ. ವಿವಾದ ಭುಗಿಲೆದ್ದ ಬಳಿಕ ಸೋಶಿಯಲ್ ಮೀಡಿಯಾದಲ್ಲಿ ಎರಡು ಬಣಗಳಾಗಿದ್ದವು. ಕೆಲವರು ವಿರೋಧ ವ್ಯಕ್ತಪಡಿಸಿದರೆ, ಇನ್ನೂ ಕೆಲವರು ಡಾಲಿ ಧನಂಜಯ್ ಪರವಾಗಿ ವಾದ ಮಂಡಿಸಿದ್ದರು. ಇದನ್ನೂ ಓದಿ : – ‘ಕಾಂತಾರ’ ಸಿನಿಮಾ ನೋಡಿ ಮೆಚ್ಚಿಕೊಂಡ ರಜನಿಕಾಂತ್
We Stand With Dhananjay ಎಂದು ಹ್ಯಾಶ್ ಟ್ಯಾಗ್ ಟ್ರೆಂಡ್ ಆಗಿತ್ತು. ಈ ಹಿಂದೆ ಡಾಲಿ ಧನಂಜಯ್ ಹೇಳಿದ್ದ ‘ಬಡವರ ಮನೆ ಮಕ್ಕಳು ಬೆಳೀಬೇಕು ಕಣ್ರಯ್ಯ’ ಎಂಬ ಮಾತು ಸಖತ್ ವೈರಲ್ ಆಯಿತು. ಈ ಬಗ್ಗೆಯೂ ಧನಂಜಯ್ ಪ್ರತಿಕ್ರಿಯಿಸಿದ್ದಾರೆ. ‘ನನಗೆ ತುಂಬಾ ಜನ ಪ್ರೀತಿ ತೋರಿಸಿದ್ದಾರೆ. ಹೀಗಾಗಿ ನಾನು ಬಡವನಲ್ಲ. ಜನರ ಪ್ರೀತಿ ಪಡೆದ ನಾನು ದೊಡ್ಡ ಶ್ರೀಮಂತ’ ಎಂದು ಹೇಳಿದ್ದಾರೆ.
ಇದನ್ನೂ ಓದಿ : – ‘ಹೆಡ್ ಬುಷ್’ ಸಿನಿಮಾದಲ್ಲಿ ವೀರಗಾಸೆಗೆ ಅವಮಾನ – ಡಾಲಿ ಧನಂಜಯ್ ಸ್ಪಷ್ಟನೆ