ದ್ರತಿ ಕ್ರಿಯೇಷನ್ಸ್ ಮತ್ತು ಸಕ್ಸಸ್ ಫಿಲ್ಮ್ಸ್ ಬ್ಯಾನರ್ ಅಡಿ ತ್ರಿವಿಕ್ರಮ್ ಸಪಲ್ಯ ನಿರ್ಮಿಸುತ್ತಿರುವ ಸುಧೀರ್ ಅತ್ತಾವರ್ ನಿರ್ದೇಶನದ ಕರಿ ಹೈದ….ಕರಿ ಅಜ್ಜ … ( KARI AJJA ) ಸಿನೆಮಾದಲ್ಲಿ ಅಂತರರಾಷ್ಟ್ರೀಯ ಖ್ಯಾತಿಯ ಹಾಲಿವುಡ್ ಹಾಗೂ ಬಾಲಿವುಡ್ ನಟ ಕಬೀರ್ ಬೇಡಿ ( KABHIR BEDI ) ನಟಿಸಿದ್ದಾರೆ.
ಯುರೋಪಿನಾದ್ಯಂತ ಪ್ರಸಿದ್ದಿ ಪಡೆದ ” ಸಂದೀಕನ್” ಟಿವಿ ಸೀರಿಸ್ ನಲ್ಲಿ ನಟಿಸಿರುವ ಕಬೀರ್ ಬೇಡಿ, ರಾಷ್ಟ್ರೀಯ ಹಾಗೂ ಅಂತರಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ್ದಾರೆ. “ಕರಿ ಹೈದ ಕರಿ ಅಜ್ಜ” ಚಿತ್ರದ ತಮ್ಮ ಪಾತ್ರದ ಬಗ್ಗೆ “ಕಬೀರ್ ಬೇಡಿ” ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದಾರೆ. ಸುಧೀರ್ ಅತ್ತಾವರ್ ನಿರ್ದೇಶಿಸಿರುವ ಈ ಚಿತ್ರದಲ್ಲಿ ನಟಿಸಿದ್ದು ಖುಷಿಯಾಗಿದೆ. ಕೊರಗಜ್ಜ ದೈವದ ಕುರಿತಾದ ಈ ಚಿತ್ರದಲ್ಲಿ ರಾಜನ ಪಾತ್ರ ನನ್ನದು. ಶೃತಿ, ಭವ್ಯ, ಭರತ್ ಸೂರ್ಯ ಮುಂತಾದ ಕಲಾವಿದರ ಜೊತೆ ಅಭಿನಯಿಸಿದ್ದ ಅನುಭವವನ್ನು ಹಂಚಿಕೊಂಡ ಕಬೀರ್ ಬೇಡಿ, ಬೆಂಗಳೂರಿನ ನೃತ್ಯ ಗ್ರಾಮಕ್ಕೆ ಬರುತ್ತಿದ್ದುದ್ದನ್ನು ಹಾಗೂ ಗಿರೀಶ್ ಕಾರ್ನಾಡ್ ಅವರ ಜೊತೆಗಿನ ಒಡನಾಟವನ್ನು ನೆನಪಿಸಿಕೊಂಡಿದ್ದಾರೆ. ಇದನ್ನೂ ಓದಿ : – ಹುಬ್ಬಳ್ಳಿಯಲ್ಲಿ ಉದ್ಯಮಿ ಭರತ್ ಜೈನ್ ಪುತ್ರ ಅಖಿಲ್ ಜೈನ್ ಶವ ಪತ್ತೆ….!
ನಮ್ಮ ಕುಟುಂಬದವರಿಗೆ “ಕೊರಗಜ್ಜ” ನ ಮೇಲೆ ವಿಶೇಷ ಭಕ್ತಿ. ಹಾಗಾಗಿ ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದೇವೆ. ಚಿತ್ರತಂಡದ ಪ್ರೋತ್ಸಾಹದಿಂದ ಚಿತ್ರ ಉತ್ತಮವಾಗಿ ಮೂಡಿ ಬರುತ್ತಿದೆ. ಅಂದುಕೊಂಡಂತೆ ಆದರೆ, ಏಪ್ರಿಲ್ ಅಥವಾ ಮೇ ನಲ್ಲಿ ಚಿತ್ರ ತೆರೆಗೆ ಬರಲಿದೆ ಎಂದು ನಿರ್ಮಾಪಕ ತ್ರಿವಿಕ್ರಮ ಸಪಲ್ಯ ತಿಳಿಸಿದ್ದಾರೆ. ಕಬೀರ್ ಬೇಡಿ ಅವರಂತಹ ಮಹಾನ್ ನಟನ ಜೊತೆ ಅಭಿನಯಿಸಿದ್ದು ತುಂಬಾ ಸಂತೋಷವಾಗಿದೆ. ನಾನು ಈ ಚಿತ್ರದಲ್ಲಿ ರಾಣಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಸುಧೀರ್ ಅತ್ತಾವರ್ ಒಳ್ಳೆಯ ಚಿತ್ರ ನಿರ್ದೇಶಿಸುತ್ತಿದ್ದಾರೆ. ನಿಮ್ಮೆಲ್ಲರ ಬೆಂಬಲವಿರಲಿ ಎಂದರು ಹಿರಿಯ ನಟಿ ಭವ್ಯ ( BHAVYA ) ಹೇಳಿದ್ದಾರೆ.
ಇದನ್ನೂ ಓದಿ : – ವಿಷ್ಣುವರ್ಧನ್ ಹೊಸ ಮನೆಗೆ ಭೇಟಿ ನೀಡಿದ ಯಶ್ ರಾಧಿಕಾ, ಸುದೀಪ್