Political NewsState News

ಇಂದು ಭಾರತ್ ಜೋಡೋ ಯಾತ್ರೆಯ ಸಮಾರೋಪ ಸಮಾರಂಭ.. ರಾಹುಲ್ ಗಾಂಧಿ ನಡೆದು ಬಂದ ಹಾದಿ ಇಲ್ಲಿದೆ…

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಭಾರತ್ ಜೋಡೋ ಯಾತ್ರೆ ನಿನ್ನೆ ಭಾನುವಾರ ಅಂತ್ಯಗೊಂಡಿತು.

ಕಾಂಗ್ರೆಸ್ (CONGRESS) ಮುಖಂಡ ರಾಹುಲ್ ಗಾಂಧಿ( RAHUL GANDHI )  ನೇತೃತ್ವದಲ್ಲಿ ನಡೆದ ಭಾರತ್ ಜೋಡೋ ಯಾತ್ರೆ (BHARATH JODO YATHRE) ನಿನ್ನೆ ಭಾನುವಾರ ಅಂತ್ಯಗೊಂಡಿತು. ಇಂದು ಸೋಮವಾರ ಸಮಾರೋಪ ಸಮಾರಂಭ ನಡೆಯಲಿದೆ.

ಸೆಪ್ಟಂಬರ್ 7ರಂದು ದಕ್ಷಿಣ ತುದಿ ಕನ್ಯಾಕುಮಾರಿಯಿಂದ ಆರಂಭಗೊಂಡ ಪಾದಯಾತ್ರೆ 12 ರಾಜ್ಯಗಳಲ್ಲಿ ಸಂಚರಿಸಿ ಉತ್ತರ ತುದಿ ಕಾಶ್ಮೀರದಲ್ಲಿ ಸಮಾಪ್ತಿಗೊಂಡಿದೆ. ಶ್ರೀನಗರ (SRI NAGARA) ದ ಲಾಲ್ ಚೌಕ್ ನಲ್ಲಿ ರಾಷ್ಟ್ರಧ್ವಜ ಆರೋಹಣ ಮಾಡಿದ್ದು ಯಾತ್ರೆಗೆ ಫೈನಲ್ ಟಚ್ ಕೊಟ್ಟಂತಾಗಿದೆ. ಲೋಕಸಭೆ ಚುನಾವಣೆಗೆ ಒಂದು ವರ್ಷ ಇರುವ ಮುನ್ನ ಭಾರತ್ ಜೋಡೋ ಯಾತ್ರೆಗೆ ಬಹುತೇಕ ಕಡೆ ಉತ್ತಮ ಸ್ಪಂದನೆ ಸಿಕ್ಕಿದೆ. ಪಾದಯಾತ್ರೆ ಹೋದ ಕಡೆಯಲೆಲ್ಲಾ ನೂರಾರು, ಸಾವಿರಾರು ಜನರು ಸೇರಿದ್ದಾರೆ. ರಾಹುಲ್ ಗಾಂಧಿ ಜೊತೆ ಬಹಳ ಮಂದಿ ಹೆಜ್ಜೆ ಹಾಕಿದ್ದಾರೆ. ಇದನ್ನು ಓದಿ :- ಭಾವನಾತ್ಮಕವಾಗಿ ಟ್ವೀಟ್ ಮಾಡಿ ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾದ ಸೂರಜ್ ರೇವಣ್ಣ

ಇಂದಿನ ಕಾರ್ಯಕ್ರಮಗಳೇನು..?
ನಿನ್ನೆ ಪಾದಯಾತ್ರೆ ಮುಕ್ತಾಯವಾಗಿದೆ. ಇಂದು ಶ್ರೀನಗರ್ ನಲ್ಲಿರುವ ಜಮ್ಮು ಮತ್ತು ಕಾಶ್ಮೀರದ ಕಾಂಗ್ರೆಸ್ ಮುಖ್ಯಕಚೇರಿಯಲ್ಲಿ ನಡೆಯುವ ಕಾರ್ಯಕ್ರಮದ ಮೂಲಕ ಭಾರತ್ ಜೋಡೋ ಯಾತ್ರೆ ಅಧಿಕೃತವಾಗಿ ತೆರೆಬೀಳಲಿದೆ. ಅದಾದ ಬಳಿಕ ಇದೇ ನಗರದಲ್ಲಿರುವ ಶೇರ್–ಎ–ಕಾಶ್ಮೀರ್ ಸ್ಟೇಡಿಯಂನಲ್ಲಿ ಬೃಹತ್ ಸಾರ್ವಜನಿಕ ಸಮಾವೇಶ ನಡೆಯಲಿದೆ. ಕಾಂಗ್ರೆಸ್ ಹಾಗೂ ಇತರ ಹಲವು ರಾಜಕೀಯ ಪಕ್ಷಗಳ ಮುಖಂಡರು ಈ ಸಮಾವೇಶದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ.

ಭಾರತ್ ಜೋಡೋ ಯಾತ್ರೆಯ ಸಮಾರೋಪಕ್ಕೆ ಕಾಂಗ್ರೆಸ್ ಪಕ್ಷ ಬಹುತೇಕ ವಿಪಕ್ಷಗಳಿಗೆ ಆಹ್ವಾನ ನೀಡಿದೆ. ಆಮ್ ಆದ್ಮಿ, ತೆಲಂಗಾಳ ರಾಷ್ಟ್ರೀಯ ಸಮಿತಿ, ತೃಣಮೂಲ ಕಾಂಗ್ರೆಸ್ ಸೇರಿದಂತೆ 21 ರಾಜಕೀಯ ಪಕ್ಷಗಳಿಗೆ ಆಮಂತ್ರಣ ಹೋಗಿದೆ. ಆದರೆ, ಎಐಎಡಿಎಂಕೆ, ವೈಎಸ್ಆರ್ ಕಾಂಗ್ರೆಸ್, ಬಿಜೆಡಿ, ಎಐಎಂಐಎಂ, ಎಐಯುಡಿಎಫ್ ಈ ಐದು ರಾಜಕೀಯ ಪಕ್ಷಗಳಿಗೆ ಕಾಂಗ್ರೆಸ್ ಆಹ್ವಾನ ನೀಡಿಲ್ಲ.
ಇದನ್ನು ಓದಿ :- ಕೋಲಾರಮ್ಮ ದೇವಾಲಯಕ್ಕೆ ಯತೀಂದ್ರ ಸಿದ್ದರಾಮಯ್ಯ ಭೇಟಿ…!

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!