ಆಮ್ ಆದ್ಮಿ ಪಕ್ಷದ ಸಚಿವ ಸತ್ಯೇಂದ್ರ ಜೈನ್ ( SATHYENDRA JAIN ) ಗೆ ತಿಹಾರ್ ಜೈಲಿನಲ್ಲಿ ವ್ಯಕ್ತಿಯೊಬ್ಬರು ಮಸಾಜ್ ಮಾಡುತ್ತಿರುವ ಹಳೆಯ ವೀಡಿಯೊವನ್ನು ಬಿಜೆಪಿ ಇಂದು ಬಿಡುಗಡೆ ಮಾಡಿದೆ.
ಜೈನ್ ಗೆ ವಿಐಪಿ ಸೌಕರ್ಯ ನೀಡಿರುವ ಆರೋಪದ ಮೇಲೆ ಕೆಲ ದಿನಗಳ ಹಿಂದೆ ತಿಹಾರ್ ಜೈಲಿನ ಸೂಪರಿಂಟೆಂಡೆಂಟ್ ಅಜಿತ್ ಕುಮಾರ್ ( AJITH KUMARA ) ಅವರನ್ನು ಅಮಾನತುಗೊಳಿಸಲಾಗಿತ್ತು. ಮೂಲಗಳ ಪ್ರಕಾರ, ಈ ವೀಡಿಯೋ ಹಳೆಯದ್ದಾಗಿದೆ. ಘಟನೆಗೆ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಜೈಲು ಸಿಬ್ಬಂದಿ ವಿರುದ್ಧ ಜೈಲು ಅಧಿಕಾರಿಗಳು ಈಗಾಗಲೇ ಕ್ರಮ ಕೈಗೊಂಡಿದ್ದಾರೆ. ಇದನ್ನೂ ಓದಿ : – ಊರುಕುಂಟೆ ಮಿಟ್ಟೂರು ಗ್ರಾಮದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಗ್ರಾಮ ವಾಸ್ತವ್ಯ..!
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮೇ 30ರಂದು ಬಂಧಿತರಾಗಿರುವ ಸತ್ಯೇಂದ್ರ ಜೈನ್ ಗೆ ತಿಹಾರ್ ಜೈಲಿನಲ್ಲಿ ವಿಐಪಿ ಸೌಕರ್ಯ ನೀಡಲಾಗುತ್ತಿದೆ. ತಲೆ, ಪಾದ ಮತ್ತು ಬೆನ್ನಿಗೆ ಮಸಾಜ್ ಮಾಡುವಂತಹ ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದು ಜಾರಿ ನಿರ್ದೇಶನಾಲಯ ಆರೋಪಿಸಿದೆ. ದೆಹಲಿ ಸಚಿವರು ಜೈಲಿನಲ್ಲಿ ಐಷಾರಾಮಿ ಜೀವನವನ್ನು ನಡೆಸಿರುವುದಕ್ಕೆ ಸಂಬಂಧಿಸಿದಂತೆ ಹಣಕಾಸು ಸಂಸ್ಥೆ ನ್ಯಾಯಾಲಯಕ್ಕೆ ಪುರಾವೆಗಳನ್ನು ಸಲ್ಲಿಸಿದೆ. ಅಪರಿಚಿತ ವ್ಯಕ್ತಿಗಳು ಸತ್ಯೇಂದ್ರ ಜೈನ್ ಗೆ ಮಸಾಜ್ ಹಾಗೂ ವಿಶೇಷ ಆಹಾರವನ್ನು ನೀಡಲಾಗುತ್ತಿದೆ ಎಂದು ಇಡಿ ಪರ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್ವಿ ರಾಜು ಹೇಳಿದ್ದಾರೆ.
ಇದನ್ನೂ ಓದಿ : – ಹೆಚ್ಡಿಕೆ ಆಲ್ ದಿ ಬೆಸ್ಟ್ ಎಂದು ಶುಭಾಶಯ ಕೋರಿದ ಶಾಲಾ ಮಕ್ಕಳು