Sports News

ಪಂತ್ ಆದಷ್ಟು ಬೇಗ ಗುಣಮುಖರಾಗಲಿ – ಮಹಾಕಾಳೇಶ್ವರನಿಗೆ ಪೂಜೆ ಸಲ್ಲಿಸಿದ ಸೂರ್ಯ, ಕುಲ್ ದೀಪ್

ಭೀಕರ ರಸ್ತೆ ಅಪಘಾತಕ್ಕೀಡಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕ್ರಿಕೆಟಿಗ ರಿಷಬ್ ಪಂತ್ ಶೀಘ್ರ ಗುಣಮುಖರಾಗುವಂತೆ ಟೀಂ ಇಂಡಿಯಾ ಆಟಗಾರರು ಇಂದು ಉಜ್ಜಯಿನಿಯ ಪ್ರಸಿದ್ಧ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ಭೀಕರ ರಸ್ತೆ ಅಪಘಾತಕ್ಕೀಡಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕ್ರಿಕೆಟಿಗ ರಿಷಬ್ ಪಂತ್ ಶೀಘ್ರ ಗುಣಮುಖರಾಗುವಂತೆ ಟೀಂ ಇಂಡಿಯಾ (TEAM INDIA)ಆಟಗಾರರು ಇಂದು ಉಜ್ಜಯಿನಿಯ ಪ್ರಸಿದ್ಧ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ನ್ಯೂಜಿಲೆಂಡ್ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಈಗಾಗಲೇ 2 ಪಂದ್ಯಗಳನ್ನು ಗೆದ್ದು ಸರಣಿ ವಶಪಡಿಸಿಕೊಂಡಿರುವ ಭಾರತ ತಂಡ ಜನವರಿ 24ರಂದು ಅಂತಿಮ ಏಕದಿನ ಪಂದ್ಯವನ್ನಾಡಲಿದೆ. ಇದಕ್ಕೂ ಮುನ್ನ ಮಧ್ಯಪ್ರದೇಶದ ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಟೀಂ ಇಂಡಿಯಾ ಆಟಗಾರರು ಪ್ರಾರ್ಥನೆ ಸಲ್ಲಿಸಿದ್ದಾರೆ. ಸ್ಫೋಟಕ ಬ್ಯಾಟ್ಸ್ ಮ್ಯಾನ್ ಸೂರ್ಯಕುಮಾರ್ ಯಾದವ್, ಸ್ಪಿನ್ ಬೌಲರ್ ಕುಲ್ದೀಪ್ ಯಾವದ್ ಹಾಗೂ ಆಲ್ ರೌಂಡರ್ ವಾಷಿಂಗ್ಟನ್ ಸುಂದರ್ ಇಂದು ಬೆಳಗ್ಗೆ ಮಹಾಕಾಳೇಶ್ವರ ದೇವಸ್ಥಾನಕ್ಕೆ ತೆರಳಿ `ರಿಷಬ್ ಪಂತ್’ ಆದಷ್ಟು ಬೇಗ ಗುಣಮುಖರಾಗಿ ಟೀಂ ಇಂಡಿಯಾಕ್ಕೆ ಮರಳುವಂತೆ ಭಕ್ತಿಭಾವದಿಂದ ಪ್ರಾರ್ಥನೆ ಸಲ್ಲಿಸಿದ್ದಾರೆ. ಇದನ್ನು ಓದಿ :- ಶುಭ್ ಮನ್ ಗಿಲ್ ದ್ವಿಶತಕ, ಕಿವೀಸ್ ಗೆ ಗೆಲ್ಲಲು 350 ರನ್ ಗಳ ಬೃಹತ್ ಗುರಿ ನೀಡಿದ ಭಾರತ

ಸಾಂಪ್ರದಾಯಿಕ ಧೋತಿ, ಅಂಗವಸ್ತ್ರ ಉಡುಗೆ ತೊಟ್ಟು ಮುಂಜಾನೆ ನಡೆದ ಶಿವನ `ಭಸ್ಮ ಆರತಿ’ಯಲ್ಲೂ ಭಾಗಿಯಾಗಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಸೂರ್ಯಕುಮಾರ್ ಯಾದವ್, `ರಿಷಬ್ ಪಂತ್ ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ನಾವು ಪ್ರಾರ್ಥಿಸಿದ್ದೇವೆ. ಅವರ ಪುನರಾಗಮನ ನಮಗೆ ಬಹಳ ಮುಖ್ಯ. ನಾವು ಈಗಾಗಲೇ ನ್ಯೂಜಿಲೆಂಡ್ ವಿರುದ್ಧದ ಸರಣಿ ಗೆದ್ದಿದ್ದೇವೆ. ಅವರ ವಿರುದ್ಧದ ಅಂತಿಮ ಪಂದ್ಯ ಎದುರು ನೋಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಇದನ್ನು ಓದಿ :- ಫಿಲ್ಡಿಂಗ್ ವೇಳೆ ಅವಘಡ – ಮೈದಾನದಲ್ಲೇ ಬಿದ್ದು ನರಳಾಡಿದ ಇಬ್ಬರು ಲಂಕಾ ಆಟಗಾರರು

 

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!