ಉಡುಪಿ: ಕಳೆದೊಂದು ವಾರದ ಅರಶಿನಗುಂಡಿ ಜಲಪಾತದಲ್ಲಿ ರೀಲ್ಸ್ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ನೀರುಪಾಲಾಗಿದ್ದ ಯುವಕನ ಮೃತದೇಹ ಇಂದು (ಭಾನುವಾರ) ಪತ್ತೆಯಾಗಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಕೆ.ಎಚ್. ನಗರದ ಸುಣ್ಣದಹಳ್ಳಿ ನಿವಾಸಿ ಶರತ್ ಕುಮಾರ್ (23) ಮೃತರಾದವರು ಎನ್ನಲಾಗಿದೆ.
ಪೊಲೀಸರು, ಅಗ್ನಿಶಾಮಕ ದಳ, ಮುಳುಗು ತಜ್ಞ ಈಶ್ವರ್ ಮಲ್ಪೆ, ಜ್ಯೋತಿರಾಜ್ ಹಾಗೂ ಎನ್ಡಿಆರ್ಎಫ್ ತಂಡದಿಂದ ಸತತವಾಗಿ ಶೋಧ ಕಾರ್ಯ ನಡೆಸಲಾಗಿತ್ತು. ಬಳಿಕ ಡ್ರೋಣ್ ಮೂಲಕವೂ ಹುಡುಕಾಟ ನಡೆಸಲಾಗಿತ್ತು. ಇಂದು ಬೆಳಗ್ಗೆ ಶರತ್ ಕುಮಾರ್ ಅವರ ಮೃತದೇಹ ಅರಶಿನಗುಂಡಿ ಜಲಪಾತದಿಂದ 200 ಮೀಟರ್ ಕೆಳಗಡೆ ಪೊಟರೆಯೊಳಗೆ ಸಿಲುಕಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.