State News

ಚಿಕ್ಕಮಗಳೂರಿನಲ್ಲಿ ಸಾಲಭಾಧೆ ತಾಳಲಾರದೆ ರೈತ ಆತ್ಮಹತ್ಯೆ

ಚಿಕ್ಕಮಗಳೂರು: ರಾಜ್ಯದಲ್ಲಿ ರೈತರ ಆತ್ಮಹತ್ಯೆ ಹೆಚ್ಚಾಗುತ್ತಲೇ ಇದೆ. ಚಿಕ್ಕಮಗಳೂರಿನ ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಭಾನುವಾರ ರಂದು ಚಿಕ್ಕಮಗಳೂರು ಜಿಲ್ಲೆಯ ಕಡೂರು ) ತಾಲೂಕಿನ ತಂಗಲಿ ಗ್ರಾಮದ ರೈತ ಆತ್ಮಹತ್ಯೆ ಮಾಡಿಕೊಂಡಿದ್ದರು. ಮತ್ತೆ ಇಂದು ಇದೇ ತಾಲೂಕಿನ ಜೋಡಿ ಲಿಂಗದಹಳ್ಳಿ ಗ್ರಾಮದ ರೈತ ಕೃಷ್ಣನಾಯ್ಕ್ (55) ಸಾಲ ಭಾದೆ ತಾಳಲಾರದೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೃಷ್ಣ ನಾಯ್ಕ್ ಅವರು 3 ಲಕ್ಷ ರೂ. ಸಾಲ ಮಾಡಿ ರಾಗಿ, ಜೋಳ ಬಿತ್ತನೆ ಮಾಡಿದ್ದರು. ಮಳೆ‌‌ ಇಲ್ಲದೆ ಬೆಳೆ‌ ನಾಶವಾದ ಹಿನ್ನೆಲೆಯಲ್ಲಿ ಮನನೊಂದು ರೈತ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಳೆದ 40 ದಿನಗಳಲ್ಲಿ ಕಡೂರು ತಾಲೂಕಿನಲ್ಲಿ ಐದು ಜನ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಈ ಘಟನೆ ಸಂಬಂದ ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!