ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಸಬ್ಬೇನಹಳ್ಳಿ ಗ್ರಾಮದ ಬಳಿ ಕುಡಿದ ಮತ್ತಿನಲ್ಲಿ ವ್ತಕ್ತಿಯೊಬ್ಬ ಬೈಕ್ ಓಡಿಸಲಾಗದೆ ಮಧ್ಯರಾತ್ರಿ ರಸ್ತೆ ಮಧ್ಯೆ ಮಲಗಿರುವ ಘಟನೆ ನಡೆದಿದೆ. ಅದೃಷ್ಟವಶಾತ್ ಬೈಕ್ನ ಇಂಡಿಕೇಟರ್ ಆನ್ ಇದ್ದಿದ್ದರಿಂದ ಆತನ ಜೀವ ಉಳಿದಿದೆ.
ಆತ ಹಾಸನದಿಂದ ಸಂಬಂಧಿಕರ ಮನೆಗೆ ಬಂದಿದ್ದ ಬೈಕ್ ಸವಾರ ಕುಡಿದ ಮತ್ತಿನಲ್ಲಿ ಬೈಕ್ ಓಡಿಸಲಾಗದೆ ರಾತ್ರಿ ವೇಳೆ ರಸ್ತೆ ಮಧ್ಯೆ ಮಲಗಿದ್ದ.ಅದೇ ರಸ್ತೆ ಮೂಲಕ ಬಂದಿದ್ದ ಇತರ ಪ್ರಯಾಣಿಕರು ರೋಡ್ ಮಧ್ಯೆ ಇಂಡಿಕೇಟರ್ ಆನ್ ಆಗಿ ಬಿದ್ದಿದ್ದ ಬೈಕ್ ಕಂಡು ಅಪಘಾತವಾಗಿರುವುದೆಂದು ಭಾವಿಸಿದ್ದಾರೆ. ಆಂಬ್ಯುಲೆನ್ಸ್ ಕರೆ ಮಾಡಿದ್ದಾರೆ.
ಆದ್ರೆ ಈತ ಸ್ಥಳಕ್ಕೆ ಆಂಬ್ಯುಲೆನ್ಸ್ ಬರುತ್ತಿದ್ದಂತೆ ಬೈಕ್ ಸವಾರ ಸೈರನ್ ಸದ್ದು ಕೇಳಿ ಎದ್ದು ಕುಳಿತಿದ್ದಾನೆ. ಅದೃಷ್ಟವಶಾತ್ ಬೈಕ್ ಇಂಡಿಕೇಟರ್ ಆನ್ ಇದ್ದಿದ್ದರಿಂದ ರಸ್ತೆಯಲ್ಲಿ ಪ್ರಯಾಣಿಕ ಮಲಗಿರುವುದು ತಿಳಿದುಬಂದಿದೆ. ಇಲ್ಲದೇ ಹೋಗಿದ್ದಲ್ಲಿ ಆತನ ಉಪಸ್ಥಿತಿ ತಿಳಿಯದೆ ಅಪಘಾತವಾಗುವ ಸಾಧ್ಯತೆ ಇತ್ತು ಎಂದು ಇತರ ಪ್ರಯಾಣಿಕರು ತಿಳಿಸಿದ್ದಾರೆ.