ಬೆಂಗಳೂರು: ಇಂದು (ನ.17) ಸಂಜೆ 6 ಗಂಟೆಗೆ ಖಾಸಗಿ ಹೋಟೆಲ್ನಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ (BJP Legislature Party Meeting) ನಡೆಯಲಿದೆ.
ವಿಧಾನಸಭೆ ಮತ್ತು ವಿಧಾನ ಪರಿಷತ್ ವಿಪಕ್ಷ ನಾಯಕರ ನೇಮಕಾತಿ ವಿಚಾರವಾಗಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಸಭೆಯಲ್ಲಿ ಹೈಕಮಾಂಡ್ ವೀಕ್ಷಕರು ವಿಪಕ್ಷ ನಾಯಕರ ಹೆಸರು ಘೋಷಣೆಯಾಗುವ ಸಾಧ್ಯತೆಯಿದೆ. ವಿಧಾನಸಭೆಗೆ ಒಕ್ಕಲಿಗ ಮತ್ತು ವಿಧಾನ ಪರಿಷತ್ಗೆ ಹಿಂದುಳಿದ ವರ್ಗಕ್ಕೆ ಅವಕಾಶ ಸಿಗುವ ಸಾಧ್ಯತೆಯಿದೆ.
ವಿಧಾನಸಭೆಗೆ ರೇಸ್ನಲ್ಲಿ ಶಾಸಕರಾದ ಆರ್. ಅಶೋಕ್, ಡಾ. ಅಶ್ವಥ್ ನಾರಾಯಣ ಮತ್ತು ಅರಗ ಜ್ಞಾನೇಂದ್ರ ಹೆಸರು ಇದೆ. ವಿಧಾನ ಪರಿಷರ್ಗೆ ಕೋಟ ಶ್ರೀನಿವಾಸ ಪೂಜಾರಿ, ತೇಜಸ್ವಿನಿ ಗೌಡ, ಛಲವಾದಿ ನಾರಾಯಣಸ್ವಾಮಿ ಮತ್ತು ಭಾರತಿ ಶೆಟ್ಟಿ ಹೆಸರು ಒಬಿಸಿ ಕೋಟದಲ್ಲಿ ಸುನಿಲ್ ಕುಮಾರ್ ರೇಸ್ನಲ್ಲಿದ್ದಾರೆ. ಬಹುತೇಕ ಆರ್. ಅಶೋಕ್ ಮತ್ತು ಕೋಟ ಶ್ರೀನಿವಾಸ ಪೂಜಾರಿ ವಿಪಕ್ಷ ನಾಯಕರಾಗಿ ಆಯ್ಕೆ ಸಾಧ್ಯತೆಯಿದೆ. ಬಿಜೆಪಿ ಶಾಸಕಾಂಗ ಸಭೆಗೆ ಹೈಕಮಾಂಡ್ ವೀಕ್ಷಕರಾಗಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಆಗಮಿಸುತ್ತಿದ್ದಾರೆ.
ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಬಿ.ಎಸ್ ಯಡಿಯೂರಪ್ಪ ಪುತ್ರ ಬಿ.ವೈ ವಿಜಯೇಂದ್ರ ಅಧಿಕೃತವಾಗಿ ಅಧಿಕಾರ ಸ್ವೀಕಾರ ಮಾಡಿದ್ದಾರೆ ಈ ಬೆನ್ನಲ್ಲೆ ರಾಜ್ಯ ಬಿಜೆಪಿಯಲ್ಲಿ ಚಟುವಟಿಕೆಗಳು ಗರಿಗೆದರಿವೆ ಎಂದರೆ ತಪ್ಪಗಲಾರದು..