State News

ಹಂಪಿ ಉತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ..!

ವಿಜಯನಗರ : ಬಹಳ ವಿಳಂಬದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮೂರು ದಿನಗಳ ಹಂಪಿ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ.

ರಾಜ್ಯದಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಹಂಪಿ ಉತ್ಸವವನ್ನು ಸರಳವಾಗಿ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ರಾತ್ರಿ 8 ಗಂಟೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಸಂಪುಟದ ಹಲವು ಸಚಿವರ ಸಮ್ಮುಖದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಉತ್ಸವ ಉದ್ಘಾಟನೆ ನೆರವೇರಿಸಲಿದ್ದಾರೆ. ವಿಜಯನಗರ ಜಿಲ್ಲಾಡಳಿತವು ಉತ್ಸವಕ್ಕೆ 17 ಕೋಟಿ ರೂ.ಗೆ ಪ್ರಸ್ತಾವನೆ ಸಲ್ಲಿಸಿದ್ದು, ರಾಜ್ಯದಿಂದ 14 ಕೋಟಿ ರೂ. ನೀಡಲಾಗುತ್ತಿದೆ. ಉಳಿದ ಹಣವನ್ನು ಸ್ಥಳೀಯವಾಗಿ ಹೊಂದಿಸಲಾಗಿದೆ.

ಫೆಬ್ರವರಿ 2, 3 ಮತ್ತು 4 ರಂದು ಗ್ರಾಮೀಣ ಕ್ರೀಡೆಗಳು, ರಂಗೋಲಿ ಸ್ಪರ್ಧೆಗಳು, ಸಂಗೀತ, ಸಾಹಸ ಕ್ರೀಡೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಮುಖ್ಯ ಕಾರ್ಯಕ್ರಮದ ಪೂರ್ವಭಾವಿಯಾಗಿ ಕಳೆದ ವಾರ ಜಿಲ್ಲಾಡಳಿತದ ವತಿಯಿಂದ ಬೈಕ್ ರ‍್ಯಾಲಿ, ತುಂಗಾ ಆರತಿ, ವಿವಿಧ ಕಲೆಗಳ ಪ್ರದರ್ಶನದಂತಹ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

ಏಕಕಾಲದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲು ನಾಲ್ಕು ದೊಡ್ಡ ವೇದಿಕೆಗಳನ್ನು ರಚಿಸಲಾಗಿದೆ. ಹಂಪಿ ಉತ್ಸವದ ಸಂದರ್ಭದಲ್ಲಿ ಹಲವಾರು ಪ್ರಸಿದ್ಧ ಗಾಯಕರು ಮತ್ತು ಸಂಗೀತಗಾರರು ಪ್ರದರ್ಶನ ನೀಡಲಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!