ಹುಬ್ಬಳ್ಳಿ: ಜಿಲ್ಲಾ ಉಸ್ತುವಾರಿ ಸಚಿವರ ಹೆಸರಿನಲ್ಲಿ ಬೆದರಿಕೆ ಆರೋಪ ಕೇಳಿಬಂದಿದೆ. ಕರವೇ ಪ್ರವೀಣ್ ಶೆಟ್ಟಿ ಬಣದ ಜಿಲ್ಲಾಧ್ಯಕ್ಷ ಮಂಜುನಾಥ್ ಲೂತಿಮಠ ಸೇರಿದಂತೆ ಎಂಟು ಮಂದಿ ವಿರುದ್ಧ ದೂರು ದಾಖಲಾಗಿದೆ.
ಹುಬ್ಬಳ್ಳಿ ಜಿಲ್ಲೆಯ ಶಹರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ. ಕನ್ನಡ ರಾಜ್ಯೋತ್ಸವ ಆರಚಣೆಗಾಗಿ 2 ಲಕ್ಷ ರೂ ನೀಡಬೇಕು. ಇಲ್ಲದಿದ್ದರೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಅಂಗಡಿ ನಡೆಸದಂತೆ ಮಾಡುತ್ತೇನೆಂದು ಬೆದರಿಕೆ ಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ಉದ್ಯಮಿ ವಿಜಯ ಅಳಗುಂಡಗಿ ಎಂಬುವವರು ಪ್ರಕರಣ ದಾಖಲಿಸಿದ್ದಾರೆ
ನಗರದ ಬಟರ್ ಮಾರ್ಕೆಟ್, ಜವಳಿ ಸಾಲ, ಉಳ್ಳಾಗಡ್ಡಿ ಓಣಿ ವ್ಯಾಪಾರಸ್ಥರಿಗೆ ಹೆದರಿಸಿ 2 ಲಕ್ಷದಿಂದ 3 ಲಕ್ಷ ರೂ ಹಣ ವಸೂಲಿ ಆರೋಪ ಕೇಳಿಬಂದಿದೆ. ಅಷ್ಟೇ ಅಲ್ಲ, ಅಕ್ಟೋಬರ್ 26ರಂದು ಉಳ್ಳಾಗಡ್ಡಿ ಮಠದ ಬಳಿಯ ನಿಖಿತಾ ಪ್ಲಾಸ್ಟಿಕ್ ಅಂಗಡಿ ಬಳಿ ವಿಜಯ ಅವರನ್ನು ಕರೆಸಿಕೊಂಡು ರಾಜ್ಯೋತ್ಸವಕ್ಕೆ 2 ಲಕ್ಷ ಕೊಡಬೇಕು. ಜೊತೆಗೆ ಪ್ರತಿ ಮೂರು ತಿಂಗಳಿಗೆ ನೀಡಬೇಕಾದ 1.70 ಲಕ್ಷ ರೂ ಹಣವನ್ನು ಕಡ್ಡಾಯವಾಗಿ ನೀಡಬೇಕು ಎಂದು ಹೇಳಿದ್ದಾರೆ.