ಬಾಗಲಕೋಟೆ:ರಬಕವಿ ಪಟ್ಟಣದ ಹೊಸ ಬಸ್ ನಿಲ್ದಾಣದ ಎದುರು ಡೆಡ್ಲಿ ಅಪಘಾತ ಸಂಭವಿಸಿದೆ. ಕ್ರೂಸರ್ ವಾಹನ ಬೈಕ್, ಟಂಟಂ,ಜಾಗೂ ಗೂಡ್ಸ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಹಾರಿ ಬಿದ್ದಿದ್ದಾನೆ.
ಈ ಪರಿಣಾಮವಾಗಿ ಟಂಟಂ ಮೂರು ಬಾರಿ ಪಲ್ಟಿ ಹೊಡೆದಿದೆ. ಈ ಘಟನೆಯಲ್ಲಿ ಟಂಟಂನಲ್ಲಿದ್ದ ಗೀತಾ ಜುಲ್ಪಿ, ಶಾಂತಾ ಕಾರಜೋಳ, ಬೈಕ್ ಸವಾರ ಸದಾಶಿವ ಇಂಗಳಗಿ ಎಂಬುವರಿಗೆ ಗಾಯವಾಗಿದೆ. ಸದ್ಯ ಗಾಯಾಳು ಸ್ಥಳೀಯ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಇಲ್ಲದೇ ಅದೃಷ್ಟವಶಾತ್ ಪಾರಾಗಿದೆ.
ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ. ಇದೀಗ ಚಾಲಕ ರಾಜು ಶೆಟ್ಟಿ ವಿರುದ್ದ ತೇರದಾಳ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.