ಬೆಂಗಳೂರು : ಅನಾರೋಗ್ಯದ ನಡುವೆಯೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಜನಸ್ಪಂದನಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.
ಮನೆ ಬಾಗಿಲಿಗೆ ಸರ್ಕಾರ, ಇರಲಿ ನಿಮ್ಮ ಸಹಕಾರ ಜನಸ್ಪಂದನಾ ಕಾರ್ಯಕ್ರಮ ಇಂದು ಬೆಂಗಳೂರಿನ ಪೂರ್ವ ವಲಯದಲ್ಲಿ ಹೆಬ್ಬಾಳ, ಶಿವಾಜಿನಗರ, ಪುಲಿಕೇಶಿನಗರ ಕ್ಷೇತ್ರದಲ್ಲಿ ನಡೆಯುತ್ತಿದೆ. ಬೆಂಗಳೂರಿನ ಸೇಂಟ್ ಜಾನ್ಸ್ ರಸ್ತೆಯ RBANMS ಹೈಸ್ಕೂಲ್ನಲ್ಲಿ ಜನಸ್ಪಂದನಾ ಕಾರ್ಯಕ್ರಮ ಆರಂಭವಾಗಿದ್ದು ಜ್ವರದಿಂದ ಬಳಲುತ್ತಿರುವ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಅನಾರೋಗ್ಯದ ನಡುವೆಯೂ ಕಾರ್ಯಕ್ರಮಕ್ಕೆ ಬಂದು ಜನರ ಸಮಸ್ಯೆ ಆಲಿಸುತ್ತಿದ್ದಾರೆ.
ಕೈಗೆ ಡ್ರಿಪ್ಸ್ (ಕ್ಯಾನುಲ್ಲಾ) ಹಾಕಿಸಿಕೊಂಡು ಬಂದು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಸ್ವೆಟ್ಟರ್ ಹಾಗೂ ಮಾಸ್ಕ್ ಧರಿಸಿ ಕಾರ್ಯಕ್ರಮದಲ್ಲಿ ಹಾಜರಾಗಿದ್ದಾರೆ. ಇಂದು ಮೊದಲ ಹಂತದ ಕೊನೆ ದಿನದ ಜನ ಸ್ಪಂದನಾ ಕಾರ್ಯಕ್ರಮ ನಡೆಯುತ್ತಿದೆ. ಕಾರ್ಯಕ್ರಮದಲ್ಲಿ ಹಸಿರು ರಕ್ಷಕ ಆಪ್ ಲೋಕಾರ್ಪಣೆ ಮಾಡಲಾಗಿದೆ. ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಶಾಸಕರಾದ ಎ.ಸಿ ಶ್ರೀನಿವಾಸ್, ರಿಜ್ವಾನ್ ಅರ್ಷದ್, ಸಚಿವ ಬೈರತಿ ಸುರೇಶ್ ಸಾಥ್ ನೀಡಿದ್ದಾರೆ.